Webdunia - Bharat's app for daily news and videos

Install App

ಅಮಿತ್ ಶಾ ಭೇಟಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಮೊಕ್ಕಾಂ!

Webdunia
ಶುಕ್ರವಾರ, 30 ಮಾರ್ಚ್ 2018 (09:06 IST)
ಮೈಸೂರು: ಸಿಎಂ ಸಿದ್ದರಾಮಯ್ಯನವರ ತವರೂರು ಎಂಬ ಕಾರಣಕ್ಕೆ ಮೈಸೂರು ಭಾಗ ಬಿಜೆಪಿ ಮತ್ತು ಕಾಂಗ್ರೆಸ್ ಗೆ ಪ್ರತಿಷ್ಠೆಯ ಕಣವಾಗಿದೆ. ಈಗಾಗಲೇ ಎರಡೂ ಪಕ್ಷಗಳು ಈ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ.
 

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಳೆ ಮೈಸೂರು ಭಾಗದಲ್ಲಿ ಸಂಚಾರ ನಡೆಸಿ, ಮತದಾರರ ಓಲೈಕೆಗೆ ಮುಂದಾಗುವುದರ ಜತೆಗೆ ಕಾಂಗ್ರೆಸ್ ಸೋಲಿಸಲು ತಂತ್ರ ಹೆಣೆಯುತ್ತಿದ್ದಾರೆ. ಈಗಾಗಲೇ ತಮ್ಮ ನಂಬಿಕಸ್ಥರ ತಂಡವನ್ನೇ ಇಲ್ಲಿ ಬಿಟ್ಟಿದ್ದಾರೆ.

ಶಾ, ಭೇಟಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕೂಡಾ ತಮ್ಮ ತವರು ಕ್ಷೇತ್ರದ ಬಗ್ಗೆ ಹಚ್ಚಿನ ಮುತುವರ್ಜಿ ವಹಿಸಲು ಖುದ್ದು ನಾಲ್ಕು ದಿನಗಳ ಪ್ರವಾಸ ಮಾಡಲಿದ್ದಾರೆ. ಇಲ್ಲಿಯೇ ಬೀಡುಬಿಟ್ಟು ತಾವು ಸ್ಪರ್ಧಿಸುವ ಚಾಮುಂಡೇಶ್ವರಿ ಕ್ಷೇತ್ರದ ಕಡೆಗೆ ಹೆಚ್ಚಿನ ಗಮನ ಕೊಡಲು ಉದ್ದೇಶಿಸಿದ್ದಾರೆ. ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದರಿಂದ ಮತ್ತೆ ಗೆಲ್ಲುವ ವಿಶ್ವಾಸವೇನೋ ಸಿದ್ದರಾಮಯ್ಯರಿಗಿದೆ.

ಅದರೆ ತಮ್ಮ ಹಳೆಯ ಸ್ನೇಹಿತ, ಬಿಜೆಪಿ ಸೇರಿಕೊಂಡಿರುವ ಶ್ರೀನಿವಾಸ ಪ್ರಸಾದ್ ಸೇರಿದಂತೆ ಹಲವರು ಸಿಎಂ ಸೋಲಿಗೆ ಟೊಂಕ ಕಟ್ಟಿ ನಿಂತಿರುವುದರಿಂದ ತಮ್ಮ ಕ್ಷೇತ್ರವನ್ನು ಹಗುರವಾಗಿ ಕಾಣುವಂತಿಲ್ಲ. ಹಾಗಾಗಿ ಎರಡೂ ಪಕ್ಷಗಳಿಂದ ಇಲ್ಲಿ ಜಿದ್ದಾ ಜಿದ್ದಿನ ಫೈಟ್ ನಿರೀಕ್ಷಿಸಬಹುದಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments