Webdunia - Bharat's app for daily news and videos

Install App

ಅಮಿತ್ ಶಾ ಭೇಟಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಮೊಕ್ಕಾಂ!

Webdunia
ಶುಕ್ರವಾರ, 30 ಮಾರ್ಚ್ 2018 (09:06 IST)
ಮೈಸೂರು: ಸಿಎಂ ಸಿದ್ದರಾಮಯ್ಯನವರ ತವರೂರು ಎಂಬ ಕಾರಣಕ್ಕೆ ಮೈಸೂರು ಭಾಗ ಬಿಜೆಪಿ ಮತ್ತು ಕಾಂಗ್ರೆಸ್ ಗೆ ಪ್ರತಿಷ್ಠೆಯ ಕಣವಾಗಿದೆ. ಈಗಾಗಲೇ ಎರಡೂ ಪಕ್ಷಗಳು ಈ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ.
 

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಳೆ ಮೈಸೂರು ಭಾಗದಲ್ಲಿ ಸಂಚಾರ ನಡೆಸಿ, ಮತದಾರರ ಓಲೈಕೆಗೆ ಮುಂದಾಗುವುದರ ಜತೆಗೆ ಕಾಂಗ್ರೆಸ್ ಸೋಲಿಸಲು ತಂತ್ರ ಹೆಣೆಯುತ್ತಿದ್ದಾರೆ. ಈಗಾಗಲೇ ತಮ್ಮ ನಂಬಿಕಸ್ಥರ ತಂಡವನ್ನೇ ಇಲ್ಲಿ ಬಿಟ್ಟಿದ್ದಾರೆ.

ಶಾ, ಭೇಟಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕೂಡಾ ತಮ್ಮ ತವರು ಕ್ಷೇತ್ರದ ಬಗ್ಗೆ ಹಚ್ಚಿನ ಮುತುವರ್ಜಿ ವಹಿಸಲು ಖುದ್ದು ನಾಲ್ಕು ದಿನಗಳ ಪ್ರವಾಸ ಮಾಡಲಿದ್ದಾರೆ. ಇಲ್ಲಿಯೇ ಬೀಡುಬಿಟ್ಟು ತಾವು ಸ್ಪರ್ಧಿಸುವ ಚಾಮುಂಡೇಶ್ವರಿ ಕ್ಷೇತ್ರದ ಕಡೆಗೆ ಹೆಚ್ಚಿನ ಗಮನ ಕೊಡಲು ಉದ್ದೇಶಿಸಿದ್ದಾರೆ. ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದರಿಂದ ಮತ್ತೆ ಗೆಲ್ಲುವ ವಿಶ್ವಾಸವೇನೋ ಸಿದ್ದರಾಮಯ್ಯರಿಗಿದೆ.

ಅದರೆ ತಮ್ಮ ಹಳೆಯ ಸ್ನೇಹಿತ, ಬಿಜೆಪಿ ಸೇರಿಕೊಂಡಿರುವ ಶ್ರೀನಿವಾಸ ಪ್ರಸಾದ್ ಸೇರಿದಂತೆ ಹಲವರು ಸಿಎಂ ಸೋಲಿಗೆ ಟೊಂಕ ಕಟ್ಟಿ ನಿಂತಿರುವುದರಿಂದ ತಮ್ಮ ಕ್ಷೇತ್ರವನ್ನು ಹಗುರವಾಗಿ ಕಾಣುವಂತಿಲ್ಲ. ಹಾಗಾಗಿ ಎರಡೂ ಪಕ್ಷಗಳಿಂದ ಇಲ್ಲಿ ಜಿದ್ದಾ ಜಿದ್ದಿನ ಫೈಟ್ ನಿರೀಕ್ಷಿಸಬಹುದಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ತೆರಳುವವರಿಗೆ ಹೊಸ ರೂಲ್ಸ್

Axiom Mission 4: 41 ವರ್ಷದ ಬಳಿಕ ಭಾರತೀಯ ಶುಭಾಂಶು ಶುಕ್ಲಾ ಗಗನಯಾತ್ರಿ ಬಾಹ್ಯಾಕಾಶಕ್ಕೆ

ನಾನಾ ವೇಷ ತೊಟ್ಟು ಓಡಾಡಿದ್ದ ಪ್ರಧಾನಿ ಮೋದಿ: ಆ ಪುಸ್ತಕದಲ್ಲಿ ಎಲ್ಲಾ ಮಾಹಿತಿ

Arecanut price: ಅಡಿಕೆ, ತೆಂಗು ಬೆಳೆಗಾರರಿಗೆ ಇಂದು ನಿಜಕ್ಕೂ ಬಂಪರ್ ಸುದ್ದಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ
Show comments