Webdunia - Bharat's app for daily news and videos

Install App

ಅಮಿತ್ ಶಾ ಹೇಳಿಕೆಯಿಂದ ಬಿಜೆಪಿಗೆ ಇನ್ನೊಂದು ತಲೆನೋವು

Webdunia
ಬುಧವಾರ, 4 ಏಪ್ರಿಲ್ 2018 (09:00 IST)
ಬೆಂಗಳೂರು: ಇತ್ತೀಚೆಗೆ ಮೈಸೂರಿನಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಳ್ಳಾರಿ ಗಣಿ ದೊರೆ ಜನಾರ್ಧನ ರೆಡ್ಡಿ ಬಗ್ಗೆ ನೀಡಿದ ಹೇಳಿಕೆಯೊಂದು ಹೊಸ ತಲೆನೋವು ಸೃಷ್ಟಿಸಿದೆ.

ಗಣಿ ಅಕ್ರಮದಿಂದಾಗಿ ಶಿಕ್ಷೆಗೊಳಗಾಗಿದ್ದ ಬಿಜೆಪಿ ನಾಯಕ ಜನಾರ್ಧನ ರೆಡ್ಡಿಯನ್ನು ಮರಳಿ ಪಕ್ಷಕ್ಕೆ ಕರೆಸಿಕೊಳ್ಳುವ ಬಗ್ಗೆ ಶಾ ಅವರಲ್ಲಿ ಪ್ರಶ್ನಿಸಿದಾಗ, ಜನಾರ್ಧನ ರೆಡ್ಡಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂದಿದ್ದರು. ಇದೀಗ ಜನಾರ್ಧನ ರೆಡ್ಡಿ ಅಸಮಾಧಾನಕ್ಕೆ ಕಾರಣವಾಗಿದೆ.

ಹೇಗಾದರೂ ಈ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಸೋಲುಣಿಸುವ ಶಪಥ ಮಾಡಿದ್ದ ಜನಾರ್ಧನ ರೆಡ್ಡಿಗೆ ಇದರಿಂದ ಹಿನ್ನಡೆಯುಂಟಾಗಿದೆ. ಇದೇ ಕಾರಣಕ್ಕೆ ಸ್ನೇಹಿತ, ಸಂಸದ ಶ್ರೀರಾಮುಲು ಮೂಲಕ ಇದೀಗ ಜನಾರ್ಧನ ರೆಡ್ಡಿಯನ್ನು ಸಮಾಧಾನಿಸುವ ತೆರೆ ಮರೆಯ ಯತ್ನ ನಡೆಸಲಾಗುತ್ತಿದೆ ಎನ್ನಲಾಗಿದೆ. ಜನಾರ್ಧನ ರೆಡ್ಡಿಯನ್ನು ಸಮಾಧಾನಿಸುವಂತೆ ಸ್ವತಃ ಯಡಿಯೂರಪ್ಪ ಶ್ರೀರಾಮುಲುಗೆ ಸೂಚನೆ ನೀಡಿದ್ದಾರೆ ಎಂಬ ಹೇಳಿಕೆ ಬರುತ್ತಿದೆ.

ಈ ನಡುವೆ ಅಮಿತ್ ಶಾ ಹೇಳಿಕೆಯಿಂದ ಬೇಸರಗೊಂಡಿರುವ ಜನಾರ್ಧನ ರೆಡ್ಡಿ ತಮ್ಮ ಬೆಂಬಲಿಗರನ್ನು ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿಸಲಿದ್ದಾರೆ ಎಂಬ ವರದಿ ಬಂದಿತ್ತು. ಒಂದು ವೇಳೆ ರೆಡ್ಡಿ ಹೀಗೆ ಮಾಡಿದರೆ ಬಿಜೆಪಿಗೆ ದೊಡ್ಡ ನಷ್ಟವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಮತಗಳವು ಪ್ರತಿಭಟನೆಗೆ ಬೆಂಗಳೂರಿನಲ್ಲಿ ಮರಗಳಿಗೆ ಕತ್ತರಿ

ಧರ್ಮಸ್ಥಳ ಕೇಸ್ ಗೆ ಇಂದು ಮಹತ್ವದ ತಿರುವು ಗ್ಯಾರಂಟಿ

Arecanut price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

Viral video: ಚಲಿಸುತ್ತಿದ್ದ ಬಸ್ ನಿಂದ ಅಮ್ಮನ ಮಡಿಲಲ್ಲಿದ್ದ ಮಗು ಬಿದ್ದೇ ಹೋಯ್ತು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments