ಅಮ್ಮ ಅಮ್ಮನ ಕಷ್ಟ ನೋಡಕ್ಕೆ ಆಗ್ತಿಲ್ಲ; ಕಿಡ್ನಿ ಮಾರಲು ಸರ್ಕಾರದ ಪರ್ಮಿಷನ್ ಕೇಳಿದ ಬಾಲಕ

Sampriya
ಶುಕ್ರವಾರ, 10 ಜನವರಿ 2025 (15:46 IST)
Photo Courtesy X
ಚಾಮರಾಜನಗರ: ಮೈಕ್ರೋ ಫೈನಾನ್ಸ್ ಕಂಪನಿಗಳ ಸಾಲದ ಕಿರುಕುಳಕ್ಕೆ ಬೇಸತ್ತ ಬಾಲಕನೊಬ್ಬ ಸಾಲ ತೀರಿಸಲು ಕಿಡ್ನಿ ಮಾರಲು ಪರ್ಮಿಷನ್ ಮಾಡಿ ಕೊಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದ ಮನಕಲಕುವ ಘಟನೆ ನಡೆದಿದೆ.

ಕಿಡ್ನಿ ಮಾರಿಯಾದರೂ ಅಪ್ಪ ಅಮ್ಮನ ಸಾಲ ತೀರಿಸುತ್ತೇನೆ. ಇದಕ್ಕೆ ಸರ್ಕಾರ ಅನುಮತಿ ಮಾಡಿಕೊಡಬೇಕೆಂದು ಸರ್ಕಾರಕ್ಕೆ ಬಳಿ ಹೇಳಿಕೊಂಡಿದ್ದಾನೆ.

ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಕೆಲ ಕುಟುಂಬಗಳು ಚಾಮರಾಜನಗರ ಜಿಲ್ಲೆಯ ಹಲವೆಡೆ ಊರನ್ನೇ ತೊರೆದು ಹೋದ ಘಟನೆಗಳು ನಡೆದಿದೆ. ಮಕ್ಕಳ ವಿದ್ಯಾಭ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ಗ್ರಾಮವನ್ನೇ ತೊರೆದಿದ್ದಾರೆ.

ನಮ್ಮಮ್ಮ ಚಾಪೆ ಹಾಸಿ ಸಾಲ ಕಟ್ಟು ಅಂತಾರೆ ಸಾರ್. ಕೈ ಮುಗಿದು ಕೇಳಿಕೊಳ್ತೀನಿ. ನನ್ನ ಒಂದು ಕಿಡ್ನಿ ಮಾರೋಕೆ ಪರ್ಮಿಷನ್ ಕೊಡ್ಸಿ ಸರ್. ಕಿಡ್ನಿ ಮಾರಿ ಅಪ್ಪ-ಅಮ್ಮನ ಸಾಲ ತೀರಿಸಿ ಹೆಂಗೋ ಬದುಕೊಂಡು ಹೋಗ್ತೀವಿ. ಸರ್ಕಾರ ಪರ್ಮಿಷನ್ ಕೊಟ್ರೆ ನನ್ನ ಕಿಡ್ನಿ ಮಾರಿ ಸಾಲ ತೀರಿಸ್ತೀನಿ ಎಂದು ಬಾಲಕನೊಬ್ಬ ಮನವಿ ಮಾಡಿಕೊಂಡಿದ್ದಾನೆ.

ಬಾಲಕನ ಮನವಿಯಲ್ಲಿ ಹೀಗಿದೆ: ರಾತ್ರಿ ವೇಳೆ ಹೊತ್ತಲ್ಲದ ಹೊತ್ತಿನಲ್ಲಿ ಮನೆ ಬಾಗಿಲಿಗೆ ಬಂದು ಕೆಟ್ಟದಾಗಿ ಬೈತಾರೆ.  ನಾವು ಸಾಯುತ್ತೇವೆ, ನೀವು ವಿದ್ಯಾಭ್ಯಾಸ ಮಾಡಿ ಎಂದು ಅಪ್ಪ ಅಮ್ಮ ಹೇಳುತ್ತಾರೆ. ಪೋಷಕರನ್ನು ಬಿಟ್ಟು ನಾವು ಹೇಗೆ ಬದುಕುವುದು. ನಾವೆಲ್ಲರು ಸಾಯ್ಬೇಕು ಅನ್ನೋ ಪರಿಸ್ಥಿತಿ ಬಂದಿದೆ. ದಯವಿಟ್ಟು ಕಿಡ್ನಿ ಮಾರೋಕೆ ಪರ್ಮಿಷನ್ ಕೊಡ್ಸಿ ಸರ್ ಎಂದು ಚಾಮರಾಜನಗರ ತಾಲೂಕು ಹೆಗ್ಗವಾಡಿಪುರದ ಬಾಲಕ ಅಳಲು ತೋಡಿಕೊಂಡಿದ್ದಾನೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುರಂಗ ಮಾರ್ಗ ರಚಿಸಿದರೆ ಬೆಂಗಳೂರಿಗೆ ಆಪತ್ತು: ಛಲವಾದಿ ನಾರಾಯಣಸ್ವಾಮಿ

ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಆನಂದ ಹೆಗಡೆ

ಕೆಆರ್‌ಎಸ್‌ ಮೂರನೇ ಬಾರಿ ಭರ್ತಿ, ನಮ್ಮ ಸರ್ಕಾರದ ಮೇಲೆ ವರುಣನ ಕೃಪೆಯಿದೆ ಎಂದ ಡಿಕೆಶಿ

ಕಬ್ಬನ್ ಪಾರ್ಕ್‌ಗೆ ₹5 ಕೋಟಿ ನೀಡುವ ಬದಲು ಮೊದಲು ರಸ್ತೆ ಗುಂಡಿ ಮುಚ್ಚಿ: ಡಿಕೆಶಿಗೆ ನೆಟ್ಟಿಗರು ತರಾಟೆ

ಬುಡಕಟ್ಟು ಜನರಿಗೆ ಕಳಪೆ ಆಹಾರ, ಏನಾದ್ರೂ ಆದ್ರೆ ಯಾರು ಹೊಣೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments