Webdunia - Bharat's app for daily news and videos

Install App

ಸೇವ್ ನಂದಿನಿ ಎಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಮೆಟ್ರೋದಲ್ಲಿ ಅಮೂಲ್ ಗೆ ಅವಕಾಶ ಕೊಟ್ಟಿತಾ

Krishnaveni K
ಬುಧವಾರ, 18 ಜೂನ್ 2025 (12:21 IST)
Photo Credit: X
ಬೆಂಗಳೂರು: ರಾಜ್ಯದಲ್ಲಿ ಸೇವ್ ನಂದಿನಿ ಎಂದು ಅಭಿಯಾನ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಈಗ ನಂದಿನಿ ಬಿಟ್ಟು ನಮ್ಮ ಮೆಟ್ರೋ ನಿಲ್ದಾಣದಲ್ಲಿ ಗುಜರಾತ್ ನ ಅಮೂಲ್ ಗೆ ಅವಕಾಶ ಮಾಡಿಕೊಟ್ಟಿತಾ? ಹೀಗೊಂದು ಪ್ರಶ್ನೆ ಎದ್ದಿದೆ. ಇದಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು ನೋಡಿ.

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ನಮ್ಮದೇ ನಂದಿನಿ ಬ್ರ್ಯಾಂಡ್ ಬಿಟ್ಟು ಗುಜರಾತ್ ನ ಅಮೂಲ್ ಬ್ರ್ಯಾಂಡ್ ಗೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆಕ್ರೋಶ ಹೊರಹಾಕಿದ್ದರು. ಈ ನಿಟ್ಟಿನಲ್ಲಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸೇವ್ ನಂದಿನಿ ಅಭಿಯಾನವನ್ನೇ ಮಾಡಿದ್ದರು. ಸ್ವತಃ ರಾಹುಲ್ ಗಾಂಧಿ ಕೂಡಾ ಇದಕ್ಕೆ ಸಾಥ್ ನೀಡಿದ್ದರು.

ಆದರೆ ಈಗ ನಮ್ಮ ಮೆಟ್ರೋ ನಿಲ್ದಾಣದಲ್ಲಿ ನಂದಿನಿ ಬದಲು ಅಮೂಲ್ ಔಟ್ ಲೆಟ್ ಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದರ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ವ್ಯಂಗ್ಯ ಮಾಡಿದೆ. ಅಂದು ಸೇವ್ ನಂದಿನಿ ಎಂದು ಅಧಿಕಾರಕ್ಕೆ ಬಂದವರೇ ಈಗ ನಂದಿನಿಗೆ ಕೈಕೊಟ್ಟಿದ್ದಾರೆ ಎಂದು ವ್ಯಂಗ್ಯ ಮಾಡಿದೆ.

ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ರಾಮಲಿಂಗಾ ರೆಡ್ಡಿ ಮೆಟ್ರೋ ಇರುವುದು ಕೇಂದ್ರ ಸರ್ಕಾರದ ಅಧೀನದಲ್ಲಿ. ಅಲ್ಲಿ ಅಮೂಲ್ ಗೆ ಆದ್ಯತೆ ಕೊಡುತ್ತಿರುವುದು ನಾವಲ್ಲ. ನಾವು ಯಾವತ್ತಿದ್ದರೂ ನಂದಿನಿ ಪರವಾಗಿಯೇ ಇರೋದು. ಇದನ್ನು ಟೀಕೆ ಮಾಡ್ತಿರುವ ಜೆಡಿಎಸ್ ನವರು, ಬಿಜೆಪಿಯವರು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಸಾವಿಗೆ ಮುನ್ನ ಮನುಷ್ಯನ ತಲೆಗೆ ಬರುವ ವಿಚಾರಗಳೇನು

Video: ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಗೆ ಶೇಮ್ ಎಂದು ಮರ್ಯಾದೆ ಕಳೆದ ಪಾಕಿಸ್ತಾನಿಯರು

ಏರ್ ಇಂಡಿಯಾದಲ್ಲಿ ಪದೇ ಪದೇ ಸಮಸ್ಯೆ: ಏರ್ ಇಂಡಿಯಾ ಹೆಸರೇ ಚೇಂಜ್ ಮಾಡಿ ಅಂತಿದ್ದಾರೆ ಪಬ್ಲಿಕ್

ಅಮೆರಿಕಾಗೆ ತೆರಳಲು ಅನುಮತಿ ನೀಡದ ಕೇಂದ್ರ: ಬಂದ್ಮೇಲೆ ಎಲ್ಲಾ ಹೇಳ್ತೀನಿ ಎಂದ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments