ವಿಧಾನಸೌದ ವೀಕ್ಷಣೆಗೆ ಬಂದವರಿಗೆ ಅಪಘಾತ

Webdunia
ಸೋಮವಾರ, 30 ಜನವರಿ 2023 (19:23 IST)
ಮಧ್ಯರಾತ್ರಿ ವಿಧಾನಸೌಧ ವೀಕ್ಷಣೆಗೆ ಬರುತ್ತಿದ್ದ ಸ್ನೇಹಿತರ ಬೈಕ್ ಅಪಘಾತವಾದ ಪರಿಣಾಮ ಓರ್ವ ಸಾವನ್ನಪ್ಪಿದರೆ ಮತ್ತೋರ್ವ ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ತಡರಾತ್ರಿ ಹೈಗ್ರೌಂಡ್ ಸಂಚಾರಿ ಠಾಣಾ ವ್ಯಾಪ್ತಿಯ ಸವೆನ್ ಮಿನಿಸ್ಟರ್ಸ್ ಕ್ವಾಟ್ರಸ್ ಬಳಿ ನಡೆದಿದೆ. ಬೈಕ್ ನಿಯಂತ್ರಣ ತಪ್ಪಿ ಪಾದಚಾರಿ ಮಾರ್ಗಕ್ಕೆ ಢಿಕ್ಕಿಯಾದ ಪರಿಣಾಮ ರಾಜೇಶ್ ಎಂಬಾತ ಸಾವನ್ನಪ್ಪಿದರೆ‌ ಪರಶುರಾಮ್ ಎಂಬಾತ ಪಾರಾಗಿದ್ದಾನೆ.
 
ಖಾಸಗಿ ಆಸ್ಪತ್ರೆಯಲ್ಲಿ ಎಸಿ ಟೆಕ್ನಿಶಿಯನ್ ಆಗಿದ್ದ ರಾಜೇಶ್, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿದ್ದ ಗೋವಿಂದರಾಜು, ಹಾಗೂ ಪರಶುರಾಮ ಒಂದೇ ರೂಮಿನಲ್ಲಿ ವಾಸವಿದ್ದವರು. ತಡರಾತ್ರಿ ಮದ್ಯಪಾನ ಮಾಡಿ ಬಳಿಕ ವಿಧಾನಸೌಧ ವೀಕ್ಷಿಸಲು ಬೈಕಿನಲ್ಲಿ ತೆರಳಿದ್ದರು.ರಾಜೇಶ್ ಹಾಗೂ ಪರಶುರಾಮ್ ಒಂದು ಬೈಕಿನಲ್ಲಿದ್ದರೆ, ಗೋವಿಂದರಾಜು ಮತ್ತೊಂದು ಬೈಕಿನಲ್ಲಿದ್ದ. ರಾತ್ರಿ 2 ಗಂಟೆ ಸುಮಾರಿಗೆ ತೆರಳುತ್ತಿರುವಾಗ ಪ್ಯಾಲೇಸ್ ರಸ್ತೆಯ ಸೆವೆನ್ ಮಿನಿಸ್ಟರ್ಸ್ ಕ್ವಾರ್ಟರ್ಸ್ ಬಳಿ ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಬೈಕ್ ಪಾದಚಾರಿ ಮಾರ್ಗಕ್ಕೆ ಢಿಕ್ಕಿಯಾಗಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಸ್ನೇಹಿತರಿಬ್ಬರನ್ನ ಗೋವಿಂದರಾಜು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಾಜೇಶ್ ಸಾವನ್ನಪ್ಪಿದ್ದಾನೆ.
 
ಇಬ್ಬರೂ ಸಹ ಮದ್ಯಪಾನ ಮಾಡಿದ್ದು, ಹೆಲ್ಮೆಟ್ ಧರಿಸದಿರುವುದು ಅನಾಹುತಕ್ಕೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೈಗ್ರೌಂಡ್ಸ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments