Webdunia - Bharat's app for daily news and videos

Install App

ಅಧಿವೇಶನದಲ್ಲಿ ಮಾಧ್ಯಮ ನಿರ್ಬಂಧ ಖಂಡಿಸಿ ರೋಡಿಗಿಳಿದ ಕಾಂಗ್ರೆಸ್

Webdunia
ಗುರುವಾರ, 10 ಅಕ್ಟೋಬರ್ 2019 (19:17 IST)
ಕರ್ನಾಟಕ ರಾಜ್ಯ ಸರ್ಕಾರದಿಂದ  ವಿಧಾನಸಭಾ ಅಧಿವೇಶನದ ಕಲಾಪದ ವೇಳೆಯಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಸರಕಾರದ ಕ್ರಮ ಖಂಡಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಮಾಧ್ಯಮಕ್ಕೆ ಅಧಿವೇಶನದಲ್ಲಿ ನಿರ್ಬಂಧ ಹೇರಿರುವುದು ಖಂಡನೀಯ. ಮಾಧ್ಯಮಗಳು ಸಾರ್ವಜನಿಕ ಹಾಗೂ ಸರ್ಕಾರದ ನಡುವಿನ ಕೊಂಡಿಯಂತೆ ಕಾರ್ಯನಿರ್ವಹಿಸುತ್ತವೆ. ಮಾಧ್ಯಮಗಳಿಗೆ ಈ ರೀತಿ ನಿರ್ಬಂಧ ಹೇರಿರುವುದು ಸರಿಯಲ್ಲ. ಅಲ್ಲದೇ ಪ್ರತಿಯೊಂದು ಅಧಿವೇಶನಗಳು ಸಾರ್ವಜನಿಕರಿಗೆ ಅರ್ಥವಾಗಬೇಕೆಂದರೆ ಮಾಧ್ಯಮಗಳು ಪ್ರಮುಖ ಪಾತ್ರವಹಿಸುತ್ತವೆ.

ಅಧಿವೇಶನಗಳು  ಪಾರದರ್ಶಕತೆಯಿಂದ ನಡೆಯಬೇಕಿದ್ದರೆ ಅದು ಮಾಧ್ಯಮಗಳಿಗೆ ಪ್ರವೇಶಕ್ಕೆ ಅನುಮತಿ ನೀಡಿದಾಗ ಮಾತ್ರ. ಆದರೆ ಇದೀಗ ರಾಜ್ಯ ಸರ್ಕಾರ ಮಾಧ್ಯಮಗಳನ್ನು ಹೊರಗಿಟ್ಟು ಅಧಿವೇಶನ ನಡೆಸುವುದು ಸರಿಯಲ್ಲ. ಕೂಡಲೇ ಮಾಧ್ಯಮಗಳ ಮೇಲೆ ಹೇರಿರುವ ನಿರ್ಬಂಧವನ್ನು ಮರಳಿ ಪಡೆಯಬೇಕೆಂದು ಆಗ್ರಹಿಸಿದರು. ಅಲ್ಲದೇ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan war: ಇಸ್ಲಾಮಾಬಾದ್ ಮೇಲೆ ಭಾರತ ದಾಳಿ

India Pakistan war: ರಜೌರಿಯ ಅಗಸದಲ್ಲಿ ಕ್ಷಿಪಣಿ ದಾಳಿಯ ಭಯಾನಕ ವಿಡಿಯೋ

Video: ಜಮ್ಮು ಮೇಲೆ ದಾಳಿಗೆ ಯತ್ನಿಸಿದ ಪಾಕಿಸ್ತಾನ, ಲಾಹೋರ್ ನತ್ತ ನುಗ್ಗಿದ ಭಾರತ

Operation Sindoor ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಭಾರತದಲ್ಲಿರುವ ಪಾಕ್‌ ಮಹಿಳೆ

Sofiya Qureshi, ಪಾಕ್‌ ಸೇನೆಯ ಪ್ರಯತ್ನವೆಲ್ಲ ವಿಫಲ: ಕರ್ನಲ್ ಸೋಫಿಯಾ ಖುರೇಷಿ

ಮುಂದಿನ ಸುದ್ದಿ
Show comments