Select Your Language

Notifications

webdunia
webdunia
webdunia
webdunia

ತಂಪು ಪಾನೀಯ ಕುಡಿಯಲು ಬಂದ ವ್ಯಕ್ತಿಯ ಮೇಲೆ ಹಲ್ಲೆ

ತಂಪು ಪಾನೀಯ ಕುಡಿಯಲು ಬಂದ ವ್ಯಕ್ತಿಯ ಮೇಲೆ ಹಲ್ಲೆ
bangalore , ಸೋಮವಾರ, 15 ನವೆಂಬರ್ 2021 (20:44 IST)
ಬೆಂಗಳೂರು: ಕುಡಿದ ಮತ್ತಿನಲ್ಲಿದ್ದ ಐದಾರು ದುಷ್ಕರ್ಮಿಗಳು ತಂಪು ಪಾನೀಯ ಕುಡಿಯಲು ಬಂದ ವ್ಯಕ್ತಿಯ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದೆ‌.
ಮಧ್ಯಪ್ರದೇಶ ಮೂಲದ ಭೂಪತ್ ಸಿಂಗ್ (25) ಕೊಲೆಯಾದ ದುರ್ದೈವಿ.
ಮಧ್ಯಪ್ರದೇಶ ಮೂಲದ ಭೂಪತ್ ಸಿಂಗ್ 3 ತಿಂಗಳ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದ ಎನ್ನಲಾಗಿದೆ. ಜೀವನಕ್ಕಾಗಿ ಗ್ರೀಲಿಂಗ್ ಕೆಲಸ‌ ಮಾಡಿಕೊಂಡಿದ್ದ ಯುವಕ ಹೊಸ ಬೈಯ್ಯಪ್ಪನಹಳ್ಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಮನೆಯ ಪಕ್ಕದಲ್ಲಿದ್ದ ಅಂಗಡಿಗೆ ತಂಪು ಪಾನೀಯ ಕುಡಿಯಲು ಹೋಗಿದ್ದಾನೆ. ಈ ವೇಳೆ ಅದೇ ಅಂಗಡಿಗೆ ಕುಡಿದ ಮತ್ತಿನಲ್ಲಿದ್ದ ಐವರು ದುಷ್ಕಮಿರ್ಗಳು ಆಗಮಿಸಿದ್ದಾರೆ. ಯಾವುದೋ ಕಾರಣಕ್ಕಾಗಿ ಗುಂಪು ಮತ್ತು ಯುವಕನ ಮಧ್ಯೆ ವಾಗ್ವಾದ ನಡೆದಿದೆ. ಈ ವೇಳೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ನೇಹಿತರ ನೆರವಿನಿಂದ ಯುವಕನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಘಟನೆ ಸಂಬಂಧ ಬೈಯ್ಯಪ್ಪನಹಳ್ಳಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ. ತನಿಖೆ ಕೈಗೊಂಡಿರುವ ಪೊಲೀಸರು ಹಂತಕರ ಸುಳಿವು ದೊರೆತಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡ ಕಡ್ಡಾಯ ನೀತಿಯನ್ನು ಸಮರ್ಥಿಸಿಕೊಂಡ ಕರ್ನಾಟಕ ಸರ್ಕಾರ