Webdunia - Bharat's app for daily news and videos

Install App

ತಂಪು ಪಾನೀಯ ಕುಡಿಯಲು ಬಂದ ವ್ಯಕ್ತಿಯ ಮೇಲೆ ಹಲ್ಲೆ

Webdunia
ಸೋಮವಾರ, 15 ನವೆಂಬರ್ 2021 (20:44 IST)
ಬೆಂಗಳೂರು: ಕುಡಿದ ಮತ್ತಿನಲ್ಲಿದ್ದ ಐದಾರು ದುಷ್ಕರ್ಮಿಗಳು ತಂಪು ಪಾನೀಯ ಕುಡಿಯಲು ಬಂದ ವ್ಯಕ್ತಿಯ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದೆ‌.
ಮಧ್ಯಪ್ರದೇಶ ಮೂಲದ ಭೂಪತ್ ಸಿಂಗ್ (25) ಕೊಲೆಯಾದ ದುರ್ದೈವಿ.
ಮಧ್ಯಪ್ರದೇಶ ಮೂಲದ ಭೂಪತ್ ಸಿಂಗ್ 3 ತಿಂಗಳ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದ ಎನ್ನಲಾಗಿದೆ. ಜೀವನಕ್ಕಾಗಿ ಗ್ರೀಲಿಂಗ್ ಕೆಲಸ‌ ಮಾಡಿಕೊಂಡಿದ್ದ ಯುವಕ ಹೊಸ ಬೈಯ್ಯಪ್ಪನಹಳ್ಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಮನೆಯ ಪಕ್ಕದಲ್ಲಿದ್ದ ಅಂಗಡಿಗೆ ತಂಪು ಪಾನೀಯ ಕುಡಿಯಲು ಹೋಗಿದ್ದಾನೆ. ಈ ವೇಳೆ ಅದೇ ಅಂಗಡಿಗೆ ಕುಡಿದ ಮತ್ತಿನಲ್ಲಿದ್ದ ಐವರು ದುಷ್ಕಮಿರ್ಗಳು ಆಗಮಿಸಿದ್ದಾರೆ. ಯಾವುದೋ ಕಾರಣಕ್ಕಾಗಿ ಗುಂಪು ಮತ್ತು ಯುವಕನ ಮಧ್ಯೆ ವಾಗ್ವಾದ ನಡೆದಿದೆ. ಈ ವೇಳೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ನೇಹಿತರ ನೆರವಿನಿಂದ ಯುವಕನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಘಟನೆ ಸಂಬಂಧ ಬೈಯ್ಯಪ್ಪನಹಳ್ಳಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ. ತನಿಖೆ ಕೈಗೊಂಡಿರುವ ಪೊಲೀಸರು ಹಂತಕರ ಸುಳಿವು ದೊರೆತಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments