Select Your Language

Notifications

webdunia
webdunia
webdunia
webdunia

ರಾಜ್ಯ ಸಚಿವ ಸಂಪುಟ ರಚನೆಗೆ ಕೊನೆಗೂ ಮುಹೂರ್ತ ಫಿಕ್ಸ್

ಸಂಪುಟ ವಿಸ್ತರಣೆ
ಬೆಂಗಳೂರು , ಬುಧವಾರ, 29 ಜನವರಿ 2020 (19:37 IST)
ಉಪ ಚುನಾವಣೆ ನಡೆದು ಫಲಿತಾಂಶ ಬಂದು ತಿಂಗಳಾದರೂ ವಿಸ್ತರಣೆ ಭಾಗ್ಯ ಕಾಣದಿದ್ದ ಸಚಿವ ಸಂಪುಟಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆದಂತಾಗಿದೆ.

ಹಲವು ಹಿರಿಯ ನಾಯಕರು, ಮೂಲ ಬಿಜೆಪಿ ಶಾಸಕರ ಒತ್ತಡ ಸೇರಿಂದತೆ ಹಲವು ಸಮಸ್ಯೆಗಳ ಮತ್ತು ಒತ್ತಡಗಳ ನೊಗ ಹೊತ್ತಿರೋ ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿ ಕಡೆಗೆ ಮುಖ ಮಾಡಿದ್ದಾರೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿ ನಾಳೆಯೇ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿವೆ.

ಪದೇ ಪದೇ ಸಚಿವ ಸಂಪುಟ ವಿಸ್ತರಣೆ ಮುಂದಕ್ಕೆ ಹೋಗುತ್ತಿದೆ. ಹೀಗಾಗಿ ಹೇಗಾದರೂ ಮಾಡಿ ವಿಸ್ತರಣೆ ಮಾಡಿಯೇ ಸಿದ್ಧ ಅನ್ನೋ ಹುಮ್ಮಸ್ಸಿನಲ್ಲಿ ಸಿಎಂ, ಆಕಾಂಕ್ಷಿಗಳ ಪಟ್ಟಿಯೊಂದಿಗೆ ವರಿಷ್ಠರ ಭೇಟಿಗೆ ಮುಂದಾಗಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಆ ರೋಗಕ್ಕೆ ಹೆದರಿ ಸನ್ನಿ ಲಿಯೋನ್ ಓಡಿ ಹೋಗೋದಾ?