Select Your Language

Notifications

webdunia
webdunia
webdunia
webdunia

ನಗರದಲ್ಲಿ ಶುಕ್ರವಾರ ಸ್ಫೋಟದ ಸದ್ದಿನೊಂದಿಗೆ ಭೂಕಂಪನದ ಅನುಭವ

ನಗರದಲ್ಲಿ ಶುಕ್ರವಾರ ಸ್ಫೋಟದ ಸದ್ದಿನೊಂದಿಗೆ ಭೂಕಂಪನದ ಅನುಭವ
bangalore , ಶುಕ್ರವಾರ, 26 ನವೆಂಬರ್ 2021 (22:02 IST)
ಬೆಂಗಳೂರು: ನಗರದಲ್ಲಿ ಶುಕ್ರವಾರ ಸ್ಫೋಟದ ಸದ್ದಿನೊಂದಿಗೆ ಭೂಕಂಪನದ ಅನುಭವವಾಗಿದೆ. ಇದರಿಂದ ಜನರು ಕೆಲಕಾಲ ಆಂತಕಗೊಂಡಿದ್ದರು.
ಹೆಮ್ಮಿಗೆಪುರ, ಕೆಂಗೇರಿ, ಜ್ಞಾನಭಾರತಿ, ಆರ್.ಆರ್. ನಗರ, ಕಗ್ಗಲಿಪುರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 11.50ರಿಂದ 12.15ರ ಸಮಯದಲ್ಲಿ ಶಬ್ದವು ಕೇಳಿಬಂದಿದ್ದು, ಜನರು ಭಯಭೀತರಾಗಿದ್ದರು. ಭಾರಿ ಶಬ್ದದಿಂದ ನಗರದ  ನಿವಾಸಿಗಳಲ್ಲಿ ಆತಂಕ ಮನೆ ಮಾಡಿತ್ತು.
ಇತ್ತೀಚಿನ ತಿಂಗಳಲ್ಲಿ ಕಲಬುರಗಿ, ವಿಜಯಪುರ, ಕೋಲಾರ ಸೇರಿ ವಿವಿಧ ಜಿಲ್ಲೆಗಳಲ್ಲಿ ಭೂಕಂಪನ ಹಾಗೂ ದೊಡ್ಡ ಶಬ್ದ ಕೇಳಿತ್ತು. ಪದೇ ಪದೇ ಶಬ್ದ ಕೇಳುವುದು ಮಾತ್ರವಲ್ಲದೇ ಮನೆಗಳ ಗೃಹೋಪಯೋಗಿ ವಸ್ತುಗಳು ಬಿದ್ದಿರುವ ಬಗ್ಗೆ ವರದಿಯಾಗಿತ್ತು. ಇದೇ ರೀತಿ ಮಹಾನಗರದಲ್ಲಿ ಆಗಿರುವುದು ಜನರಿಗೆ ಇನ್ನಷ್ಟು ಆತಂಕ ಹೆಚ್ಚಿಸಿದೆ. ಈ ಬಗ್ಗೆ ತಜ್ಞರು ಸಾರ್ವಜನಿಕರಿಗೆ ಮಾಹಿತಿ ನೀಡಬೇಕಿದೆ.
ಭೂಕಂಪನದ ಯಾವುದೇ ಮಾಹಿತಿ ದಾಖಲಾಗಿಲ್ಲ: 
ಹೆಮ್ಮಿಗೆಪುರ, ಕೆಂಗೇರಿ, ಜ್ಞಾನಭಾರತಿ, ಆರ್.ಆರ್. ನಗರ, ಕಗ್ಗಲಿಪುರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪನದ ಯಾವುದೇ ಮಾಹಿತಿ ದಾಖಲಾಗಿಲ್ಲ. ಭೂಕಂಪ ಮಾಪನ ಸಿಸ್ಮೋಗ್ರಾಫ್​​ನಲ್ಲಿ ಭೂಕಂಪನವಾದ ಮಾಹಿತಿ ಇಲ್ಲದಿರುವುದರಿಂದ ಭೂಕಂಪನ ಆಗಿಲ್ಲ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಸ್ಪಷ್ಟನೆ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಶೇಷ ನೊಂದಣಿ ಅಭಿಯಾನ ಮೂರು ಭಾನುವಾರಗಳಲ್ಲಿ 13,129 ಅರ್ಜಿಗಳು ಸ್ವೀಕೃತ