Webdunia - Bharat's app for daily news and videos

Install App

ಬೆಳಗಿನ ಜಾವ ವಾಯುವಿಹಾರಕ್ಕೆ ಹೊರಟಿದ್ದವರ ಎದುರಿಗೆ ಆನೆ ಬಂತೊಂದಾನೆ

geetha
ಶನಿವಾರ, 2 ಮಾರ್ಚ್ 2024 (19:07 IST)
ಬೆಳಗಾವಿ :  ಆನೆಯನ್ನು ಕಂಡೊಡನೆಯೇ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಬೆಳಗಿನ ಜಾವ ವಾಯುವಿಹಾರಕ್ಕೆ ಹೊರಟಿದ್ದವರಿಗೆ ಕಾಡಾನೆಯೊಂದು ಎದುರಾಗಿ ತಲ್ಲಣ ಸೃಷ್ಟಿಸಿರುವ ಘಟನೆ ಶುಕ್ರವಾರ ನಸುಕಿನಲ್ಲಿ ಬೆಳಗಾವಿಯಲ್ಲಿ ನಡೆದಿದೆ.ಸುದೈವವಶಾತ್‌ ಘಟನೆಯಲ್ಲಿ ಯಾವುದೆ ಗಾಯ, ನೋವು ಹಾನಿ ಸಂಭವಿಸಿಲ್ಲ. 
 
ಆಹಾರವನ್ನು ಅರಸಿ ಕಾಡಾನೆ ನಗರ ಪ್ರದೇಶಕ್ಕೆ ಬಂದಿರಬಹುದೆಂದು ಶಂಕಿಸಲಾಗಿದ್ದು, ಆನೆಯ ಸೆರೆಗೆ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ. ಇತ್ತೀಚಿಗಷ್ಟೇ ಚಿರತೆಯೊಂದು ಎಸಗಿದ ದಾಳಿಯಲ್ಲಿ ವ್ಯಕ್ತಿಯೊಬ್ಬನಿಗೆ ಗಾಯಗಳುಂಟಾಗಿತ್ತು.  
 
ಆನೆಯ ಚಲನವಲನದ ಬಗ್ಗೆ ಎಚ್ಚರಿಕೆಯಿಂದಿರುವಂತೆ ಅರಣ್ಯಾಧಿಕಾರಿಗಳೂ ಸೂಚಿಸಿದ್ದು, ಸೆಲ್ಫಿ ತೆಗೆದುಕೊಳ್ಳುವುದು, ಅಟ್ಟಿಸಿಕೊಂಡು ಹೋಗುವುದು ಮುಂತಾದ ಹುಚ್ಚಾಟಗಳಿಗೆ ಆಸ್ಪದ ನೀಡಬಾರದು ಎಂದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments