Select Your Language

Notifications

webdunia
webdunia
webdunia
webdunia

ಕಣ್ಣಲ್ಲಿ ನೀರು ತರಿಸುವಂತಹ ಘಟನೆ ! ದೇವರ ದರ್ಶನಕ್ಕೆಂದು ಹೋದವರು ದೇವರ ಪಾದ ಸೇರುದ್ರು

ಕಣ್ಣಲ್ಲಿ ನೀರು ತರಿಸುವಂತಹ ಘಟನೆ ! ದೇವರ ದರ್ಶನಕ್ಕೆಂದು ಹೋದವರು ದೇವರ ಪಾದ ಸೇರುದ್ರು
ಕಲಬುರಗಿ , ಶುಕ್ರವಾರ, 30 ಜೂನ್ 2023 (20:14 IST)
ಕಲಬುರಗಿ : ದೇವರ ದರ್ಶನಕ್ಕೆಂದು ಹೋಗಿ ಮರಳಿ ಊರಿಗೆ ಬರುವಾಗ ಸಿಮೆಂಟ್ ಟ್ಯಾಂಕರ್ ಹಾಗೂ ಕ್ರೂಸರ್ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಅಪಘಾತದಲ್ಲಿ ಐವರು ಮಹಿಳೆಯರು ಹಾಗೂ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
 
ಶುಕ್ರವಾರ ಸಂಜೆ ಅಕ್ಕಲಕೋಟ ತಾಲೂಕಿನ ಶಿರವಾಳ ವಾಡಿ ಹತ್ತಿರದ ಭೀಕರ ಅಫಘಾತ ನಡೆದಿದೆ. 6 ಜನರ ಮೃತಪಟ್ಟಿದ್ದರೆ, 10 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಲಲಿತಾಬಾಯಿ ಮಹಾದೇವ ಬುಗ್ಗೆ (50), ರೋಹಿಣಿ ಗೋಪಾಲ ಪೂಜಾರಿ (40), ಸುಂದರಾಬಾಯಿ ಭರತಸಿಂಗ್ ರಜಪೂತ (55), ಸಾಹಿನಾಥ್ ಗೋವಿಂದ ಪೂಜಾರಿ (10) ಸಂಗೀತ ಮದನ್ ಗಾನೆ (35) ಛಾಯಾ ಹನುಮಾನ ನವರೆ (46) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ 10 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸೊಲ್ಲಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ಆಳಂದ ತಾಲೂಕಿನ ಅಣ್ಣೂರ ಗ್ರಾಮದ ನಿವಾಸಿಗಳು ಎಂಬುದು ತಿಳಿದುಬಂದಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಲೋಕಸಭಾ ಚುನಾವಣೆಗೆ ತಯಾರಾದ ಬಿಜೆಪಿ