ಸಿಎಂ ಮೇಲೆ ಎಫ್‌ಐಆರ್ ದಾಖಲಾಯಿತು ಮುಂದೇನು ಎಂಬ ಪ್ರಶ್ನೆಗೆ ಇಲ್ಲಿದೆ ಮಾಹಿತಿ

Sampriya
ಶುಕ್ರವಾರ, 27 ಸೆಪ್ಟಂಬರ್ 2024 (16:32 IST)
Photo Courtesy X
ಮೈಸೂರು: ತವರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಕೊನೆಗೂ ಮುಡಾ ಹಗರಣ ಸಂಬಂಧ ಎಫ್‌ಐಆರ್ ದಾಖಲಾಗಿದೆ. ಇದೀಗ ಸಿಎಂಗೆ ನಿಜವಾದ ಮುಡಾ ಸಂಕಷ್ಟ ಎದುರಾಗಿದ್ದು,  ಮುಂದಿನ ಕಾನೂನು ನಡೆ ಬಗ್ಗೆ ಕುತೂಹಲ ಮೂಡಿದೆ.

ಹೈಕೋರ್ಟ್‌ ಆದೇಶದಂತೆ ಸಿಎಂ ವಿರುದ್ಧ ಪ್ರಕರಣ ದಾಖಲಾಗಿದ್ದು, ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಬಂಧನವಾಗುತ್ತಾರಾ ಎಂಬ ಪ್ರಶ್ನೆಯಿದೆ.  ಸಿದ್ದರಾಮಯ್ಯ ಅವರಿಗೆ ಈ ಪ್ರಕರಣದಲ್ಲಿ ಬಂಧನದ ಭೀತಿ ಎದುರಾಗುವ ಸಾಧ್ಯತೆ ತುಂಬಾನೇ ಕಡಿಮೆಯಿದೆ. ಪ್ರಕರಣವನ್ನು ಸಂಪೂರ್ಣ ತನಿಖೆ ಮಾಡಿದ ಬಳಿಕ  ಅಧಿಕಾರಿಗಳು ಸಿಎಂ ಅವರ ಪಾತ್ರದ ಆಧಾರದ ಮೇಲೆ ಅವರನ್ನು ವಿಚಾರಣೆಗೆ ನೋಟಿಸ್ ನೀಡಿ ಕರೆಸಿಕೊಳ್ಳುವ ಸಾಧ್ಯತೆಯಿದೆ. ಆದ್ದರಿಂದ ಸಿಎಂಗೆ ಬಂಧನ ಭೀತಿ ಎದುರಾಗುವ ಸಾಧ್ಯತೆಯಿಲ್ಲ.

ನ್ಯಾಯಾಲಯಕ್ಕೆ ದೂರುದಾರ ನೀಡಿದ ಎಲ್ಲ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ಅದರ ಆಧಾರ ಮೇಲೆ ಎಫ್‌ಐಆರ್ ದಾಖಲಾಗಿದೆ.   ಹಲವು ಗಂಭೀರ ಸೆಕ್ಷನ್‌ ಅಡಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಾಗಿದೆ.  ಪ್ರಕರಣ ಸಂಬಂಧ ಎಲ್ಲ ಆರೋಪಿಗಳಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರುಪಡಿಸುವ ಸಾಧ್ಯತೆಯಿದೆ. ಇನ್ನೂ ತನಿಖೆ ನಡೆಸಲು ನ್ಯಾಯಾಲಯ ಮೂರು ತಿಂಗಳ ಗಡುವು ನೀಡಿದ್ದು, ಅದರೊಳಗೆ ತನಿಖೆ ಪೂರ್ಣ ಮಾಡಿ, ಜಾರ್ಜ್‌ಶೀಟ್ ಸಲ್ಲಿಸಬೇಕಿದೆ.

ಇನ್ನು ಈ ತನಿಖೆ ಅಧಿಕಾರಿಗಳ ಕೈಯಲ್ಲಿದ್ದು, ವಿಶೇಷವಾಗಿ ಈ ಪ್ರಕರಣವನ್ನು ನ್ಯಾಯಾಲಯವೇ ತನಿಖೆಗೆ ನೀಡಿರುವುದರಿಂದ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕಾಗುತ್ತದೆ.  ತನಿಖೆ ವೇಳೆ ಸಿದ್ದರಾಮಯ್ಯ ಅವರ ಹೇಳಿಕೆ ಅಥವಾ ಪ್ರಕರಣದ ಬಗ್ಗೆ ಮಾಹಿತಿ ಬೇಕಿದ್ದಲ್ಲಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಕರೆಸಿಕೊಳ್ಳುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಥರೈಟಿಸ್ ಬರದಂತೆ ತಡೆಯಲು ಈ ಮೂರು ಕೆಲಸ ತಪ್ಪದೇ ಮಾಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕನ್ನಡಕ್ಕಿಂತ ಪರಭಾಷೆಗಳಲ್ಲೇ ಇರುವ ಪ್ರಕಾಶ್ ರಾಜ್ ಗೆ ಯಾಕೆ ರಾಜ್ಯೋತ್ಸವ ಪ್ರಶಸ್ತಿ: ನೆಟ್ಟಿಗರ ತರಾಟೆ

ಮುಟ್ಟಾಗಿದ್ದು ನಿಜಾನಾ ಎಂದು ಮಹಿಳೆಯರ ಬಟ್ಟೆ ಬಿಚ್ಚಲು ಹೇಳಿದ ಮೇಲ್ವಿಚಾರಕ

ಕೋರ್ಟ್ ಹೇಳಿದ್ರೂ ಬೆಲೆಯಿಲ್ವಾ: ಪ್ರಿಯಾಂಕ್ ಖರ್ಗೆ ವಿರುದ್ಧ ನೆಟ್ಟಿಗರು ಕಿಡಿ

ಮುಂದಿನ ಸುದ್ದಿ
Show comments