Webdunia - Bharat's app for daily news and videos

Install App

ಟಾಲಿವುಡ್ ನಲ್ಲಿ ನಿರ್ಮಾಪಕರ ಸಂಘದಿಂದ ಮಹತ್ವವಾದ ನಿರ್ಧಾರ

Webdunia
ಸೋಮವಾರ, 1 ಆಗಸ್ಟ್ 2022 (18:08 IST)
ಚಿತ್ರರಂಗದಲ್ಲಿನ ಸಮಸ್ಯೆಗಳ ಪರಿಹಾರಕ್ಕಾಗಿ ಟಾಲಿವುಡ್ ನಿರ್ಮಾಪಕರ ಸಂಘ ಮಹತ್ವದ ನಿರ್ಧಾರವೊಂದನ್ನ ಕೈಗೊಂಡಿದೆ. ಇಂದಿನಿಂದ (ಆಗಸ್ಟ್ 1) ಸಿನಿಮಾ ಶೂಟಿಂಗ್ ನಿಲ್ಲಿಸುವುದಾಗಿ ನಿರ್ಧರಿಸಿದೆ.
 
ಇತ್ತೀಚೆಗಷ್ಟೇ ಹೈದರಾಬಾದ್‌ನ ಫಿಲಂ ಚೇಂಬರ್‌ನಲ್ಲಿ ಟಿಕೆಟ್ ದರ, ಒಟಿಟಿ ಬಿಡುಗಡೆ, ಕಾರ್ಮಿಕರ ದಿನಗೂಲಿ ಸೇರಿದಂತೆ ಇತ್ಯಾದಿ ವಿಷಯಗಳ ಕುರಿತು ಸಭೆ ನಡೆಸಿದ್ದರು. ಈ ವೇಳೆ, ಎಲ್ಲ ನಿರ್ಮಾಪಕರು ಸ್ವಯಂಪ್ರೇರಣೆಯಿಂದ ಆಗಸ್ಟ್ 1 ರಿಂದ ಚಿತ್ರೀಕರಣ ತಡೆಹಿಡಿಯುವುದಾಗಿ ನಿರ್ಧರಿಸಿದ್ದರು. ಅದರಂತೆ ಸಿನಿಮಾ ಶೂಟಿಂಗ್ ನಿಲ್ಲಿಸಲಾಗಿದೆ ಎಂದು ತೆಲುಗು ಚಲನಚಿತ್ರ ನಿರ್ಮಾಪಕರ ಸಂಘ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ.ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ನಿರ್ಮಾಪಕ ದಿಲ್ ರಾಜು, 'ಕೊರೊನಾ ನಂತರ ಹೆಚ್ಚು ಹಾನಿಗೊಳಗಾದ ಉದ್ಯಮಗಳಲ್ಲಿ ಚಲನಚಿತ್ರೋದ್ಯಮವೂ ಒಂದು. ಒಂದೆಡೆ ಟಿಕೆಟ್ ದರ ಮತ್ತೊಂದೆಡೆ ಒಟಿಟಿ ಸಿನಿಮಾ ಥಿಯೇಟರ್​​ಗಳ ಉಳಿವು ಪ್ರಶ್ನಾರ್ಹವಾಗಿದೆ. ಹಾಗಾಗಿ, ನಾವು ಆಗಸ್ಟ್ 1ರಿಂದ ತೆಲುಗು ಚಿತ್ರಗಳ ಚಿತ್ರೀಕರಣವನ್ನು ನಿಲ್ಲಿಸಲು ನಿರ್ಧರಿಸಿದ್ದೇವೆ ಮತ್ತು ಪ್ರಸ್ತುತ ಪರಿಸ್ಥಿತಿಯನ್ನು ನಿವಾರಿಸುವ ಮಾರ್ಗಗಳ ಬಗ್ಗೆ ಚರ್ಚಿಸುತ್ತೇವೆ' ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments