Webdunia - Bharat's app for daily news and videos

Install App

ಶಿರೂರಿನಲ್ಲಿ ಅರ್ಜುನನಿಗಾಗಿ ಇಂದು ಮತ್ತೆ ಹುಡುಕಾಟಕ್ಕೆ ಸಿಕ್ಕಿದೆ ಮಹತ್ವದ ಮುನ್ನಡೆ

Krishnaveni K
ಬುಧವಾರ, 14 ಆಗಸ್ಟ್ 2024 (10:24 IST)
ಶಿರೂರು: ಗುಡ್ಡಕುಸಿತದಲ್ಲಿ ಶಿರೂರಿನಲ್ಲಿ ನಾಪತ್ತೆಯಾಗಿರುವ ಕೇರಳ ಮೂಲದ ಟ್ರಕ್ ಡ್ರೈವರ್ ಅರ್ಜುನ ಸೇರಿದಂತೆ ಉಳಿದವರ ಪತ್ತೆಗೆ ಇಂದಿನಿಂದ ಮತ್ತೆ ಕಾರ್ಯಾಚರಣೆ ಚುರುಕಾಗಲಿದೆ.
 

ಈಶ್ವರ ಮಲ್ಪೆ ನೇತೃತ್ವದಲ್ಲಿ ಇಂದು ಮುಳುಗು ತಜ್ಞರು ಗಂಗಾವಳಿ ನದಿಯಲ್ಲಿ ಹುಡುಕಾಟ ನಡೆಸಲಿದ್ದಾರೆ. ನಿನ್ನೆ ಈಶ್ವರ ಮಲ್ಪೆ ಒಬ್ಬರೇ ಗಂಗಾವಳಿ ನದಿಯಲ್ಲಿ ಹುಡುಕಾಟ ನಡೆಸಿದ್ದರು. ಈ ವೇಳೆ ಲಾರಿಯ ಅವಶೇಷ ಪತ್ತೆಯಾಗಿತ್ತು. ಇದು ಅರ್ಜುನ್ ಲಾರಿಯದ್ದೇ ಅವಶೇಷ ಎಂದು ಖಚಿತಪಡಿಸಲಾಗಿದೆ.

ಹೀಗಾಗಿ ಅರ್ಜುನ್ ಕುಟುಂಬದವರಲ್ಲಿ ಈಗ ಹೊಸ ಭರವಸೆ ಮೂಡಿದೆ. ಅರ್ಜುನ್ ಮೃತದೇಹ ಸಿಕ್ಕಬಹುದು ಎಂದು ಆಶಾಭಾವನೆ ಮೂಡಿದೆ. ಈ ಮೊದಲು ಲಾರಿ ಅವಶೇಷ ಸಿಕ್ಕ ಜಾಗದಿಂದಲೇ ಈಶ್ವರ ಮಲ್ಪೆ ಮತ್ತು ತಂಡದ ಹುಡುಕಾಟ ಆರಂಭವಾಗಿದೆ. ಇದೇ ಸ್ಥಳದಲ್ಲೇ ಅರ್ಜುನ್ ಮೃತದೇಹವೇನಾದರೂ ಸಿಕ್ಕಬಹುದೇನೋ ಎಂಬ ಆಶಾಭಾವನೆ.

ಇದೀಗ ಗಂಗಾವಳಿ ನದಿ ಪರಿಸರದಲ್ಲಿ ಮಳೆ ವಾತಾವರಣ ಕೊಂಚ ಕಡಿಮೆಯಾಗಿರುವುದರಿಂದ ಹುಡುಕಾಟಕ್ಕೆ ಮುನ್ನಡೆ ಸಿಕ್ಕಬಹುದು ಎಂಬ ಭರವಸೆಯಿದೆ. ನಿನ್ನೆಯ ಹುಡುಕಾಟದಲ್ಲಿ ನದಿ ತಳದಲ್ಲಿ ಸಾಕಷ್ಟು ಕಲ್ಲು ಬಂಡೆಗಳು ಬಿದ್ದಿದೆ ಎಂದು ಈಶ್ವರ ಮಲ್ಪೆ ಹೇಳಿದ್ದಾರೆ. ಹೀಗಾಗಿ ಹುಡುಕಾಟ ನಡೆಸಿದರೂ ಮೃತದೇಹ ಸಿಗುವುದು ಅಷ್ಟು ಸುಲಭವಲ್ಲ. ಅದೂ ಅಲ್ಲದೆ, ಇಷ್ಟು ದಿನ ಕಳೆದಿರುವುದರಿಂದ ಮೃತದೇಹ ಅಲ್ಲೇ ಇರಬಹುದು ಎಂದು ಖಚಿತವಾಗಿ ಹೇಳಲಾಗದು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments