Webdunia - Bharat's app for daily news and videos

Install App

ಬಿಬಿಎಂಪಿ ಆರೋಗ್ಯಾಧಿಕಾರಿಯೊಬ್ಬರು ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದ ಘಟನೆ

Webdunia
ಮಂಗಳವಾರ, 17 ಆಗಸ್ಟ್ 2021 (21:55 IST)
ಬಿಬಿಎಂಪಿ ಆರೋಗ್ಯಾಧಿಕಾರಿಯೊಬ್ಬರು ಖಾಸಗಿ ಗುತ್ತಿಗೆದಾರರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. 
ಕಾಟನ್‍ಪೇಟೆಯ 120ಸಿ ವಾರ್ಡ್‍ನ ತುಳಸಿ ತೋಟದ ಬಿಬಿಎಂಪಿಯ ಕಿರಿಯ ಆರೋಗ್ಯಾಧಿಕಾರಿ ಕೃಷ್ಣ  ಬಂಧಿತ. ಆರೋಪಿ ಸ್ವೀಕರಿಸುತ್ತಿದ್ದ 15 ಸಾವಿರ ರೂ. ಲಂಚದ ಹಣವನ್ನು ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. 
ಕೆ.ಪಿ ಅಗ್ರಹಾರದ ಗುತ್ತಿಗೆದಾರರೊಬ್ಬರು 120ನೇ ವಾರ್ಡ್‍ನಲ್ಲಿ ಬಿಬಿಎಂಪಿಯ ಶೌಚಾಲಯ ಮತ್ತು ಮೂತ್ರಾಲಯಗಳನ್ನು ಟ್ಯಾಂಕರ್ ನೀರಿನ ಮೂಲಕ ಸ್ವಚ್ಛಗೊಳಿಸುವ ಟೆಂಡರ್ ಅನ್ನು ತನ್ನ ಸಹೋದರನ ಹೆಸರಿನಲ್ಲಿ ಪಡೆದುಕೊಂಡಿದ್ದರು. ಇದನ್ನು ಸ್ವಚ್ಛಗೊಳಿಸಿದ ಆರು ತಿಂಗಳ ಬಾಬ್ತು ಹಣವನ್ನು ಬಿಡುಗಡೆ ಮಾಡುವಂತೆ ಬಿಬಿಎಂಪಿಗೆ ಅರ್ಜಿ ಸಲ್ಲಿಸಿದ್ದರು. 
ಈ ಅರ್ಜಿಯೂ ಕಿರಿಯ ಆರೋಗ್ಯಾಧಿಕಾರಿ ಕಷ್ಣ ಅವರ ಪರಿಶೀಲನೆಯಲ್ಲಿತ್ತು. ಹೀಗಾಗಿ, ಅರ್ಜಿ ಪರಿಶೀಲಿಸುವಂತೆ ಗುತ್ತಿಗೆದಾರ ಕೃಷ್ಣ ಅವರನ್ನು ಭೇಟಿ ಮಾಡಿದಾಗ ಕಡತ ಪರಿಶೀಲಿಸಲು 50 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಬೇಸರಗೊಂಡ ಗುತ್ತಿಗೆದಾರ ಎಸಿಬಿ ಪೆÇಲೀಸರಿಗೆ ಈ ಬಗ್ಗೆ ದೂರು ನೀಡಿದ್ದ. 
ಎಸಿಬಿ ಪೆÇಲೀಸರ ಪೂರ್ವ ನಿಶ್ಚಯದಂತೆ ಗುತ್ತಿಗೆದಾರ 15 ಸಾವಿರ ಹಣವನ್ನು ಆರೋಗ್ಯಾಧಿಕಾರಿ ಕೃಷ್ಣ ಅವರಿಗೆ ನೀಡಿದ್ದಾನೆ. ಹಣ ಪಡೆದುಕೊಳ್ಳುವಾಗ ಎಸಿಬಿ ಪೆÇಲೀಸರು ನೇರವಾಗಿ ಕೃಷ್ಣನನ್ನು ಬಂಧಿಸಿ, ಲಂಚದ ಹಣ ವಶಪಡಿಸಿಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments