Webdunia - Bharat's app for daily news and videos

Install App

ಬಿಬಿಎಂಪಿ ಆರೋಗ್ಯಾಧಿಕಾರಿಯೊಬ್ಬರು ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದ ಘಟನೆ

Webdunia
ಮಂಗಳವಾರ, 17 ಆಗಸ್ಟ್ 2021 (21:55 IST)
ಬಿಬಿಎಂಪಿ ಆರೋಗ್ಯಾಧಿಕಾರಿಯೊಬ್ಬರು ಖಾಸಗಿ ಗುತ್ತಿಗೆದಾರರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. 
ಕಾಟನ್‍ಪೇಟೆಯ 120ಸಿ ವಾರ್ಡ್‍ನ ತುಳಸಿ ತೋಟದ ಬಿಬಿಎಂಪಿಯ ಕಿರಿಯ ಆರೋಗ್ಯಾಧಿಕಾರಿ ಕೃಷ್ಣ  ಬಂಧಿತ. ಆರೋಪಿ ಸ್ವೀಕರಿಸುತ್ತಿದ್ದ 15 ಸಾವಿರ ರೂ. ಲಂಚದ ಹಣವನ್ನು ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. 
ಕೆ.ಪಿ ಅಗ್ರಹಾರದ ಗುತ್ತಿಗೆದಾರರೊಬ್ಬರು 120ನೇ ವಾರ್ಡ್‍ನಲ್ಲಿ ಬಿಬಿಎಂಪಿಯ ಶೌಚಾಲಯ ಮತ್ತು ಮೂತ್ರಾಲಯಗಳನ್ನು ಟ್ಯಾಂಕರ್ ನೀರಿನ ಮೂಲಕ ಸ್ವಚ್ಛಗೊಳಿಸುವ ಟೆಂಡರ್ ಅನ್ನು ತನ್ನ ಸಹೋದರನ ಹೆಸರಿನಲ್ಲಿ ಪಡೆದುಕೊಂಡಿದ್ದರು. ಇದನ್ನು ಸ್ವಚ್ಛಗೊಳಿಸಿದ ಆರು ತಿಂಗಳ ಬಾಬ್ತು ಹಣವನ್ನು ಬಿಡುಗಡೆ ಮಾಡುವಂತೆ ಬಿಬಿಎಂಪಿಗೆ ಅರ್ಜಿ ಸಲ್ಲಿಸಿದ್ದರು. 
ಈ ಅರ್ಜಿಯೂ ಕಿರಿಯ ಆರೋಗ್ಯಾಧಿಕಾರಿ ಕಷ್ಣ ಅವರ ಪರಿಶೀಲನೆಯಲ್ಲಿತ್ತು. ಹೀಗಾಗಿ, ಅರ್ಜಿ ಪರಿಶೀಲಿಸುವಂತೆ ಗುತ್ತಿಗೆದಾರ ಕೃಷ್ಣ ಅವರನ್ನು ಭೇಟಿ ಮಾಡಿದಾಗ ಕಡತ ಪರಿಶೀಲಿಸಲು 50 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಬೇಸರಗೊಂಡ ಗುತ್ತಿಗೆದಾರ ಎಸಿಬಿ ಪೆÇಲೀಸರಿಗೆ ಈ ಬಗ್ಗೆ ದೂರು ನೀಡಿದ್ದ. 
ಎಸಿಬಿ ಪೆÇಲೀಸರ ಪೂರ್ವ ನಿಶ್ಚಯದಂತೆ ಗುತ್ತಿಗೆದಾರ 15 ಸಾವಿರ ಹಣವನ್ನು ಆರೋಗ್ಯಾಧಿಕಾರಿ ಕೃಷ್ಣ ಅವರಿಗೆ ನೀಡಿದ್ದಾನೆ. ಹಣ ಪಡೆದುಕೊಳ್ಳುವಾಗ ಎಸಿಬಿ ಪೆÇಲೀಸರು ನೇರವಾಗಿ ಕೃಷ್ಣನನ್ನು ಬಂಧಿಸಿ, ಲಂಚದ ಹಣ ವಶಪಡಿಸಿಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

Bengaluru Stampede: ಡಿಸಿಎಂ ವಿರುದ್ದವೇ ಆರೋಪಿಸಿ, ಪತಿಯ ಬಂಧನ ಪ್ರಶ್ನಿಸಿದ ನಿಖಿಲ್ ಸೋಸಲೆ ಪತ್ನಿ

ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಿದ್ದಾರೆ: ವಿಜಯೇಂದ್ರ

Chenab bridge inauguration, ಬ್ರಿಟಿಷರು ಮಾಡಲು ಸಾಧ್ಯವಾಗದ್ದನ್ನು, ಮೋದಿ ಮಾಡಿ ತೋರಿಸಿದ್ದಾರೆ: ಸಿಎಂ ಒಮರ್‌ ಅಬ್ದುಲ್ಲಾ

Bengaluru Stampede: ನಾವಲ್ಲ ನೀವೇ ಮಾಡಿರೋದು.. ಸರ್ಕಾರದ ವಿರುದ್ಧ ತಿರುಗಿಬಿದ್ದ ಕೆಎಸ್ ಸಿಎ

ಮುಂದಿನ ಸುದ್ದಿ
Show comments