Webdunia - Bharat's app for daily news and videos

Install App

ವಚನ ಭ್ರಷ್ಟತೆ ಹಣೆಪಟ್ಟಿ ಹೊತ್ತ ಹೆಚ್‌ಡಿಕೆ

Webdunia
ಮಂಗಳವಾರ, 14 ಮಾರ್ಚ್ 2023 (15:01 IST)
2004ರ ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ರಾಜ್ಯದ ಜನತೆ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ನೀಡಲಿಲ್ಲ. ಹೀಗಾಗಿ ಸ್ವತಂತ್ರವಾಗಿ ಸರ್ಕಾರ ರಚನೆ ಸಾಧ್ಯವಾಗದೇ ಮೂರೂ ಪಕ್ಷಗಳು ಅತಂತ್ರ ಸ್ಥಿತಿಯಲ್ಲಿದ್ದವು.
 
ಬಿಜೆಪಿ 79 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಕಾಂಗ್ರೆಸ್ 65 ಹಾಗೂ ಜೆಡಿಎಸ್ 58 ಸ್ಥಾನಗಳನ್ನು ಗಳಿಸಿದರೆ, ಸಂಯುಕ್ತ ಜನತಾ ದಳ 5 ಸ್ಥಾನ ಗಳಿಸಿತ್ತು. ಪಕ್ಷೇತರರು 17 ಮಂದಿ ಗೆಲುವಿನ ನಗೆ ಬೀರಿದ್ದರು. ಹೀಗಿದ್ದಾಗ ಕಾಂಗ್ರೆಸ್, ಜೆಡಿಎಸ್ ಜೊತೆ ಮೈತ್ರಿ ಸಾಧಿಸಿ ಸರ್ಕಾರ ರಚಿಸಿತು. ಈ ಮೈತ್ರಿ ಕೇವಲ 20 ತಿಂಗಳು ಮಾತ್ರ ಆಡಳಿತ ನಡೆಸಿತು.

ಕಾಂಗ್ರೆಸ್ ಮೈತ್ರಿಯಿಂದ ಹೊರಬಂದ ಜೆಡಿಎಸ್ ಕುಮಾರಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಸಖ್ಯ ಬೆಳೆಸಿತು. 20-20 ಸೂತ್ರದನ್ವಯ ರಚನೆಯಾದ ಸರ್ಕಾರದ ಮೊದಲ ಅವಧಿಗೆ ಕುಮಾರಸ್ವಾಮಿ ಮುಖ್ಯಮಂತ್ರಿಯಾದರೆ, ಬಿ.ಎಸ್.ಯಡಿಯೂರಪ್ಪ ಉಪಮುಖ್ಯಮಂತ್ರಿಯಾದರು.

ಅಕ್ಟೋಬರ್ 2, 2007ಕ್ಕೆ ಬಿಜೆಪಿಗೆ ಅಧಿಕಾರ ಹಸ್ತಾಂತರಿಸಬೇಕಾಗಿದ್ದ ಕುಮಾರಸ್ವಾಮಿ ಹಿಂದೇಟಾಕಿದ ಪರಿಣಾಮ ಬಿಜೆಪಿ ಬೆಂಬಲ ವಾಪಸ್ ಪಡೆಯಿತು. ಸರ್ಕಾರ ಪತನವಾದ ಕೆಲ ದಿನಗಳ ಬಳಿಕ ಮತ್ತೆ ದೋಸ್ತಿ ಕುದುರಿದ ಪರಿಣಾಮ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಜೆಡಿಎಸ್ನಿಂದಾದ ವಚನಭ್ರಷ್ಟತೆಯನ್ನ ಮುಂದಿಟ್ಟುಕೊಂಡು ಚುನಾವಣೆಗೆ ದುಮುಕಿದ ಯಡಿಯೂರಪ್ಪ ಪಕ್ಷವನ್ನ ರಾಜ್ಯಾದ್ಯಂತ ಪುನರ್ ಸಂಘಟಿಸುವಲ್ಲಿ ಯಶಸ್ವಿಯಾದರು. ಕುಮಾರಸ್ವಾಮಿ ಅವರಿಗೆ ‘ವಚನಭ್ರಷ್ಟ’ ಹಣೆಪಟ್ಟಿ ಅಂಟಿಕೊಂಡಿತು. ಇದು ಯಡಿಯೂರಪ್ಪ ಅವರಿಗೆ ಚುನಾವಣೆಯ ವಿಷಯವಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮುಂದಿನ ಸುದ್ದಿ
Show comments