Select Your Language

Notifications

webdunia
webdunia
webdunia
webdunia

ಮಹಿಷಾ ಹೆಸರಿನಲ್ಲಿ ಚಾಮುಂಡೇಶ್ವರಿಗೆ ಅಪಮಾನ

ಮಹಿಷಾ ಹೆಸರಿನಲ್ಲಿ ಚಾಮುಂಡೇಶ್ವರಿಗೆ ಅಪಮಾನ
mysooru , ಶುಕ್ರವಾರ, 13 ಅಕ್ಟೋಬರ್ 2023 (17:42 IST)
ಮಹಿಷಾ ದಸರಾ ಹೆಸರಿನಲ್ಲಿ ತಾಯಿ ಚಾಮುಂಡೇಶ್ವರಿಗೆ ಅವಾಚ್ಯ ಶಬ್ದಗಳಿಂದ ಅಪಮಾನ ಮಾಡ್ತಾರೆ‌ ಅಂತಾ ಸಂಸದ ಪ್ರತಾಪ್​​​​ ಸಿಂಹ ಕಿಡಿಕಾರಿದ್ದಾರೆ.. ಮೈಸೂರಿನಲ್ಲಿ ಮಾತನಾಡಿದ ಅವರು, ಈ ಕಾರಣಕ್ಕೆ ನಾನು ಮಹಿಷಾ ದಸರಾ ವಿರೋಧ ಮಾಡ್ತಿನಿ. ಬೆಟ್ಟಕ್ಕೆ ಬಂದು ಮಹಿಷಾ ಒಳ್ಳೆಯವನು ಅಂದಷ್ಟೆ ಹೇಳಿ ಹೋಗುವುದಿಲ್ಲ.ಚಾಮುಂಡಿಗೆ ರವಿಕೆ ಹಾಕೋನು ಗಂಡ್ಸು, ಸೀರೆ ಉಡಿಸೋನು ಗಂಡಸು ಅಂತ ಕೆಟ್ಟದಾಗಿ ಮಾತನಾಡುತ್ತಾರೆ. ನಿಮ್ಮ ತಾಯಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರೆ ಯಾರಾದ್ರು ಒಪ್ಪಿಕೊಳ್ತಿರಾ. ಮಹಿಷಾನನ್ನ ಒಳ್ಳೆಯವನನ್ನಾಗಿ ಮಾಡಲು ಚಾಮುಂಡೇಶ್ವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಇಂತಹವರನ್ನ ತಡೆಯಲು ನಾನು ವಿರೋಧ ಮಾಡುತ್ತಿದ್ದೇನೆ‌. ಚಾಮುಂಡೇಶ್ವರಿಗೆ ಹೋಗಿ ಬೇಡಿಕೊಳ್ಳುವ ಪ್ರತಿಯೊಬ್ಬರು ಮಹಿಷಾ ದಸರಾಕ್ಕೆ ವಿರೋಧ ಮಾಡಬೇಕು.ಇಲ್ಲದಿದ್ದರೆ ತಾಯಿ ಚಾಮುಂಡಿ ಮುಂದೆ ಬೇಡಿಕೊಳ್ಳಲು ನಿಮಗೆ ಯಾವ ನೈತಿಕ ಹಕ್ಕು ಇರುವುದಿಲ್ಲ ಅಂತಾ ಆಕ್ರೋಶ ಹೊರಹಾಕಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಳಿ ತಪ್ಪಿದ ರೈಲು; ನಾಲ್ವರು ಸಾವು