Webdunia - Bharat's app for daily news and videos

Install App

ಶಾಸಕರ ಭವನದ ಯತ್ನಾಳ್ ಕೊಠಡಿ ಬಾಗಿಲಿಗೆ ಅಶ್ಲೀಲ ಭಿತ್ತಿಪತ್ರ!

Webdunia
ಬುಧವಾರ, 25 ಆಗಸ್ಟ್ 2021 (07:52 IST)
ಬೆಂಗಳೂರು (ಆ 25); ವಿಜಾಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗಿಂದಾಗ್ಗೆ ಕಾಂಗ್ರೆಸ್ ನಾಯಕರು, ಅದರಲ್ಲೂ ಮುಖ್ಯವಾಗಿ ಮಾಜಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್  ಗಾಂಧಿ ವಿರುದ್ಧ ಕಿಡಿಕಾರುವುದು ಮಾಮೂಲಿ ವಿಚಾರವಾಗಿಬಿಟ್ಟಿದೆ.ಸೋಮವಾರ ಸಹ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ್ದ ಬಸನಗೌಡ ಪಾಟೀಲ್ ಯತ್ನಾಳ್, "ರಾಹುಲ್ ಗಾಂಧಿ ಓರ್ವ ಹುಚ್ಚ. ಆತ ಹಿಂದುವೋ? ಕ್ರಿಶ್ಚಿಯನ್ನೋ? ಬಲ್ಲವರಾರು" ಎಂದು ಅವಹೇಳನ ಮಾಡಿದ್ದರು

. ಆದರೆ, ಇದಕ್ಕೆ ಪ್ರತಿಯಾಗಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಶಾಸಕರ ಭವನದ ಬಸನಗೌಡ ಪಾಟೀಲ್ ಯತ್ನಾಳ್ ಕೊಠಡಿಯ ಬಾಗಿಲಿಗೆ ಅವಾಚ್ಯ ಶಬ್ದಗಳಿಂದ ಅವರನ್ನು ನಿಂದಿಸಿರುವ ಭಿತ್ತಿಪತ್ರ ಅಂಟಿಸುವ ಮೂಲಕ ಪ್ರತಿಭಟಿಸಿದ್ದಾರೆ.
ಕೈ ಕಾರ್ಯಕರ್ತರು ಕೆಟ್ಟ ಪದಗಳನ್ನು ಬಳಸಿ ಯತ್ನಾಳ್ ರನ್ನು ನಿಂದಿಸಿರುವ ಭಿತ್ತಿ ಪತ್ರಗಳನ್ನು ಅವರ ಕೊಠಡಿ ಬಾಗಿಲಿಗೆ ಅಂಟಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹೀಗಾಗಿ ಪೊಲೀಸರು ಯತ್ನಾಳ್ ಅವರ ಕೊಠಡಿಗೆ ಆಗಮಿಸಿ ಆ ಭಿತ್ತಿಪತ್ರಗಳನ್ನು ತೆರವುಗೊಳಿಸುವ ಕೆಲಸದಲ್ಲಿ ತೊಡಗಿದ್ದಾರೆ ಎನ್ನಲಾಗಿದೆ. ಅಲ್ಲದೆ, ಸಿಸಿ ಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದು, ಶೀಘ್ರದಲ್ಲಿ ಈ ಭಿತ್ತಿ ಪತ್ರಗಳನ್ನು ಅಂಟಿಸಿದವರ ವಿರುದ್ಧಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments