ಲಂಚ ಪಡೆಯುವಾಗ ಎಸಿಬಿ ದಾಳಿಗೆ ಸಿಕ್ಕಿಬಿದ್ದ ಅಧಿಕಾರಿ

Webdunia
ಶನಿವಾರ, 21 ಮಾರ್ಚ್ 2020 (15:43 IST)
ರೈತರೊಬ್ಬರಿಂದ ಲಂಚದ ಹಣ ಪಡೆಯುವಾಗಿ ಅಧಿಕಾರಿಯೊಬ್ಬರು ಎಸಿಬಿ ನಡೆಸಿದ ದಾಳಿಯಲ್ಲಿ ಸಿಕ್ಕಿ ಬಿದ್ದಿದ್ದಾರೆ.

 ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕು ಸಿ.ಎನ್.ದುರ್ಗಾ ಹೋಬಳಿ ದಾಸಲುಕುಂಟೆ ಗ್ರಾಮದ ನಿವಾಸಿ ಮಂಜುನಾಥ್ ಎಂಬ ರೈತನಿಂದ 15 ಸಾವಿರ ರೂ.ಗಳ ಲಂಚದ ಹಣ ಪಡೆಯುವಾಗ ಗ್ರಾಮ ಲೆಕ್ಕಿಗ ಚನ್ನೇಗೌಡ ಭ್ರಷ್ಟಾಚಾರ ನಿಗ್ರಹ  ದಳಕ್ಕೆ ಸಿಕ್ಕಿಬಿದ್ದಿದ್ದಾರೆ.

ದಾಸಲುಕುಂಟೆ ಗ್ರಾಮದ ಮಂಜುನಾಥ್ ಅವರ ತಾಯಿ ನಾಗರತ್ನಮ್ಮ ಅವರ ಹೆಸರಿಗೆ ಕ್ರಯವಾಗಿರುವ ದಾಸಲುಕುಂಟೆ ಗ್ರಾಮದ ಸರ್ವೇ ನಂ.34 ರ ಎರಡು ಎಕರೆ 37 ಗುಂಟೆ ಜಮೀನಿನ ಪಹಣಿ ಮತ್ತು ಖಾತೆ ಬದಲಾವಣೆ ಮಾಡಿಸಿಕೊಡುವ ಸಲುವಾಗಿ ಗ್ರಾಮ ಲೆಕ್ಕಿಗ ಚನ್ನೇಗೌಡ 30 ಸಾವಿರ ರೂ.ಗಳ ಹಣಕ್ಕೆ ಬೇಡಿಕೆ ಇಟ್ಟು ನಂತರ 15 ಸಾವಿರ ರೂ.ಗಳಿಗೆ ಒಪ್ಪಿ ಮುಂಗಡವಾಗಿ 5 ಸಾವಿರ ರೂ. ಹಣವನ್ನು ಪಡೆದುಕೊಂಡಿರುತ್ತಾನೆ.

ಗ್ರಾಮ ಲೆಕ್ಕಾಧಿಕಾರಿ ಕಛೇರಿಯಲ್ಲಿ ಉಳಿದ ಲಂಚದ ಹಣವನ್ನು ಪಡೆಯುವ ಸಂದರ್ಭದಲ್ಲಿ ಎಸಿಬಿ ಡಿವೈಎಸ್ಪಿ ಬಿ.ಉಮಾಶಂಕರ್ ನೇತೃತ್ವದಲ್ಲಿ ತನಿಖಾಧಿಕಾರಿಯಾದ ಪೊಲೀಸ್ ಇನ್ಸ್ಪೆಕ್ಟರ್ ವಿ.ಪ್ರವೀಣ್ ಕುಮಾರ್ ಅವರು  ದಾಳಿ ನಡೆಸಿ ಹಣದ ಸಮೇತ ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿರುತ್ತಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹೋದ್ಯೋಗಿಯೊಂದಿಗಿನ ಆಫೇರ್‌ನಿಂದ 150 ಕೋಟಿ ಸಂಬಳದ ಕೆಲಸ ಕಳೆದುಕೊಂಡ ವ್ಯಕ್ತಿ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments