Publish Date: Tue, 13 Aug 2019 (13:58 IST)
Updated Date: Tue, 13 Aug 2019 (14:00 IST)
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿರೋ ಮಾಜಿ ಸಚಿವ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಹಿನ್ನೆಲೆಯಲ್ಲಿ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಮಾಜಿ ಸಚಿವ ಹಾಗೂ ಅನರ್ಹ ಶಾಸಕ ಎಂಟಿಬಿ ನಾಗರಾಜ್ ನೆರೆ ಪೀಡಿತರಿಗೆ ಹಣ ಸಹಾಯ ಮಾಡಿದ್ದಾರೆ.
ನಿತಾಶ್ರಿತರಿಗಾಗಿ ಒಂದು ಕೋಟಿ ರೂಪಾಯಿ ಸಹಾಯ ಧನ ಘೋಷಣೆ ಮಾಡಿದ್ದು, ಚೆಕ್ ವಿತರಣೆ ಮಾಡಿದ್ದಾರೆ.
ನೆರೆ ಸಂತ್ರಸ್ಥರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಂದು ಕೋಟಿ ಹಣ ಘೋಷಣೆ ಮಾಡಿ ಸಂದಾಯ ಮಾಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಅನರ್ಹ ಕೈ ಶಾಸಕ ಎಂಟಿಬಿ ನಾಗರಾಜ್ ರಿಂದ ಹಣ ವಿತರಣೆ ಮಾಡಲಾಗಿದೆ.