Publish Date: Mon, 01 Jul 2019 (10:11 IST)
Updated Date: Mon, 01 Jul 2019 (10:12 IST)
ಬೆಂಗಳೂರು : ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ರಮೇಶ್ ಕುಮಾರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಹೊಸಪೇಟೆ ವಿಧಾಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಇಂದು ಬೆಳಿಗ್ಗೆ ಬೆಂಗಳೂರಿನ ದೊಮ್ಮಲೂರಿನಲ್ಲಿರುವ ಸ್ಪೀಕರ್ ರಮೇಶ್ ಕುಮಾರ್ ನಿವಾಸಕ್ಕೆ ತೆರಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಆಪ್ತ ಮೂಲಗಳಿಂದ ಮಾಹಿತಿ ತಿಳಿದುಬಂದಿತ್ತು.
ಆದರೆ ಈ ಬಗ್ಗೆ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್, ನನಗೆ ಆನಂದ್ ಸಿಂಗ್ ರಾಜೀನಾಮೆ ಪತ್ರ ಕೊಟ್ಟಿಲ್ಲ. ಅವರ ರಾಜೀನಾಮೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲವೆಂದು ಸ್ಪಷ್ಟನೆ ನೀಡುವುದರ ಮೂಲಕ ಗೊಂದಲ ಮೂಡಿಸಿದ್ದಾರೆ.