Select Your Language

Notifications

webdunia
webdunia
webdunia
webdunia

ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣ; ಯಾವುದೇ ಕ್ಷಣದಲ್ಲಿ ಶಾಸಕ ಗಣೇಶ್ ಬಂಧನ ಸಾಧ್ಯತೆ

ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣ; ಯಾವುದೇ ಕ್ಷಣದಲ್ಲಿ ಶಾಸಕ ಗಣೇಶ್ ಬಂಧನ ಸಾಧ್ಯತೆ
ಬೆಂಗಳೂರು , ಮಂಗಳವಾರ, 22 ಜನವರಿ 2019 (12:24 IST)
ಬೆಂಗಳೂರು : ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಕಂಪ್ಲಿ ಶಾಸಕ ಗಣೇಶ್ ಬಂಧನದ ಭೀತಿ ಎದುರಾಗಿದ್ದು ಯಾವುದೇ ಕ್ಷಣದಲ್ಲಿ ಶಾಸಕ ಗಣೇಶ್ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.


ಈಗಲ್ಟನ್ ರೆಸಾರ್ಟ್ ನಲ್ಲಿ ಕಂಪ್ಲಿ ಶಾಸಕ ಗಣೇಶ್ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗಣೇಶ್ ವಿರುದ್ದ ಬಿಡದಿ ಪೋಲಿಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 323.324,504, 506 ರ ಅಡಿಯಲ್ಲಿ ಕೇಸ್ ದಾಖಲಾಗಿದೆ. ಹಾಗೇ ಶಾಸಕ ಗಣೇಶ್ ವಿರುದ್ದ ಎಫ್ ಐ ಆರ್ ಕೂಡ ದಾಖಲಾಗಿದೆ.


ಅಲ್ಲದೇ ಪ್ರಾಥಮಿಕ ತನಿಖೆಯಲ್ಲಿ ಗಣೇಶ್ ಆನಂದ್ ಸಿಂಗ್ ಗೆ ದೊಣ್ಣೆ ಹಾಗೂ ಪಾಟ್ ನಿಂದ ಹೊಡೆದು ಹೊಟ್ಟೆ, ಕಣ್ಣಿಗೆ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಕಂಪ್ಲಿ ಶಾಸಕ ಗಣೇಶ್ ಅವರನ್ನು ಯಾವುದೇ ಕ್ಷಣದಲ್ಲಿ ಶಾಸಕ ಗಣೇಶ್ ಬಂಧನ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ವಾಮೀಜಿ ಸಾವಿನಲ್ಲೂ ರಾಜಕೀಯ ಮಾಡ್ತೀರಲ್ಲಾ? ನಟಿ ರಮ್ಯಾಗೆ ಟಾಂಗ್