ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಆನಂದ ಹೆಗಡೆ

Sampriya
ಸೋಮವಾರ, 27 ಅಕ್ಟೋಬರ್ 2025 (16:26 IST)
ಹೂವಿನಹಡಗಲಿ (ವಿಜಯನಗರ): ಇಲ್ಲಿನ ದಾಕ್ಷಾಯಣಿ ಲಾಡ್ಜ್‌ನಲ್ಲಿ ಹುಬ್ಬಳ್ಳಿಯ ಉದ್ಯಮಿ ಹಾಗೂ ಸಿವಿಲ್ ಗುತ್ತಿಗೆದಾರ ಆನಂದ ಉಮೇಶ್ ಹೆಗಡೆ (40) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಪತ್ತೆಯಾಗಿದ್ದಾರೆ. 

ಆತ್ಮಹತ್ಯೆಗೆ ಶರಣಾದ ಉಮೇಶ್ ಹೆಗಡೆಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.

ಪಟ್ಟಣದ ತಾಲ್ಲೂಕು ಕ್ರೀಡಾಂಗಣ ಅಭಿವೃದ್ಧಿ ಹಾಗೂ ನವೀಕರಣ ಕಾಮಗಾರಿಯನ್ನು  ಅವರು ಟೆಂಡರ್ ಪಡೆದು ಗುತ್ತಿಗೆ ಕಾಮಗಾರಿ ನಿರ್ವಹಿಸುತ್ತಿದ್ದರು.


ಹುಬ್ಬಳ್ಳಿಯಿಂದ ಭಾನುವಾರ ಬೆಳಿಗ್ಗೆ ಪಟ್ಟಣಕ್ಕೆ ಬಂದಿದ್ದ ಆನಂದ, ದಾಕ್ಷಾಯಣಿ ಲಾಡ್ಜ್‌ನಲ್ಲಿ ಕೊಠಡಿ ಪಡೆದು ತಂಗಿದ್ದರು.

ಇಂದು ಬೆಳಿಗ್ಗೆ ಕುಟುಂಬದವರು ಅನೇಕ ಬಾರಿ ಕರೆ ಮಾಡಿದಾಗ ಸ್ವೀಕರಿಸಲಿಲ್ಲ. ಕೊಠಡಿಯ ಬಾಗಿಲು ತಟ್ಟಿದರೂ ತೆರೆಯದೇ ಇದ್ದಾಗ ಲಾಡ್ಜ್ ಸಿಬ್ಬಂದಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ರೂಂ ತೆರೆಸಿದಾಗ ಕಿಟಕಿಯ ಸರಳಿಗೆ ಬಟ್ಟೆಯಿಂದ ನೇಣು ಬಿಗಿದುಕೊಂಡಿರುವುದು ಗೊತ್ತಾಗಿದೆ.

ಪೊಲೀಸರ ಪ್ರಕಾರ, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕುಟುಂಬದವರು ಆಗಮಿಸಿ ದೂರು ನೀಡಿ, ತನಿಖೆ ನಡೆಸಿದ ಬಳಿಕ ಕಾರಣ ತಿಳಿದುಬರಲಿದೆ ಎಂದಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸೋದು ಸುಲಭ ಅಲ್ಲ, ಈ ಗುಟ್ಟು ಹೈಕಮಾಂಡ್ ಗೂ ಗೊತ್ತು

ಚಿಕ್ಕಮಗಳೂರಿನಲ್ಲಿ ಶಿಕ್ಷಕಿಯ ವಿವಸ್ತ್ರಗೊಳಿಸಿ ಲೈಂಗಿಕ ದೌರ್ಜನ್ಯ: ಕಿರುಚಿಕೊಂಡಿದ್ದಕ್ಕೆ ದುರುಳರು ಮಾಡಿದ್ದೇನು

ಆರ್ ಎಸ್ಎಸ್ ಕ್ವಿಜ್ ಹಾಗಿರ್ಲಿ, ಮೊದಲು ನಿಮ್ಮ ಕ್ಷೇತ್ರದ ಅಭಿವೃದ್ಧಿ ಮಾಡಿ: ಪ್ರಿಯಾಂಕ್ ಖರ್ಗೆಗೆ ನೆಟ್ಟಿಗರ ಕ್ಲಾಸ್

Karnataka Weather: ಇಂದೂ ಇರಲಿದೆಯಾ ಸೈಕ್ಲೋನ್ ಮೊಂಥಾ ಇಫೆಕ್ಟ್, ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments