Publish Date: Thu, 18 Jan 2024 (18:00 IST)
Updated Date: Thu, 18 Jan 2024 (18:12 IST)
ಬೆಂಗಳೂರು-ಹಿಂದು ದೇವಾಲಯಗಳನ್ನು ಕೆಡವಿ ಮಸೀದಿಗಳನ್ನು ಕಟ್ಟಲಾಗಿದೆ. ಹಾಗಾಗಿ, ಮಸೀದಿಗಳನ್ನು ಧ್ವಂಸ ಮಾಡಿ ದೇವಸ್ಥಾನಗಳನ್ನು ಕಟ್ಟಬೇಕು ಎಂದು ಅವನ್ಯಾರೋ ಮೂರ್ಖ ಹೇಳುತ್ತಾನೆ. ದಾರಿ ತಪ್ಪಿಸುವ ಇಂತಹ ಮೂರ್ಖರಿಗೆ ಚಪ್ಪಾಳೆ ತಟ್ಟಬೇಡಿ ಎಂದು ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.
ಅವರು ಮೈಸೂರು ಗರಡಿಯಲ್ಲಿ ಬೆಳೆದಿದ್ದರೆ, ನಾನು ಕೂಡ ಮೈಸೂರು ಗರಡಿಯಲ್ಲಿಯೇ ಪಳಗಿದ್ದೇನೆ. ಅದೇ ಗರಡಿಯಲ್ಲಿಯೇ ನಾನೂ ಕುಸ್ತಿ ಆಡಿದ್ದೇನೆ. ನಮ್ಮವರಿಗೆ ಏಕವಚನದಲ್ಲಿ ಮಾತನಾಡಿದರೆ ನಾನೇನು ಮಾಡಲಿ? ಎಂದು ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ ಚನ್ನಮ್ಮನ ಕಿತ್ತೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.