Webdunia - Bharat's app for daily news and videos

Install App

ಅನಂತದಲ್ಲಿ ಲೀನವಾದ ಅನಂತ: ಅಗ್ನಿಸ್ಪರ್ಶಕ್ಕೆ ಕೆಲವೇ ಕ್ಷಣಗಳ ಮೊದಲು ಬಂದ ಅಮಿತ್ ಶಾ, ಎಲ್ ಕೆ ಅಡ್ವಾಣಿ

Webdunia
ಮಂಗಳವಾರ, 13 ನವೆಂಬರ್ 2018 (14:48 IST)
ಬೆಂಗಳೂರು: ನಿನ್ನೆಯಷ್ಟೇ ವಿಧಿವಶರಾದ ಕೇಂದ್ರ ಸಚಿವ ಅನಂತ ಕುಮಾರ್ ಪಾರ್ಥಿವ ಶರೀರ ಸಕಲ ಸರ್ಕಾರಿ ಗೌರವಗಳೊಂದಿಗೆ, ಬ್ರಾಹ್ಮಣ ಸಂಪ್ರದಾಯದಂತೆ ಪಂಚ ಭೂತಗಳಲ್ಲಿ ಲೀನವಾಯಿತು.

ಚಾಮರಾಜ ಪೇಟೆಯ ರುದ್ರಭೂಮಿಯಲ್ಲಿ ಅನಂತ ಕುಮಾರ್ ಪಾರ್ಥಿವ ಶರೀರಕ್ಕೆ ಅವರ ಸಹೋದರ ನಂದ ಕುಮಾರ್ ಅಗ್ನಿ ಸ್ಪರ್ಶ ಮಾಡಿದರು. ಈ ವೇಳೆ ಕುಟುಂಬಸ್ಥರು, ವಿವಿಧ ಪಕ್ಷಗಳ ರಾಜಕೀಯ ಗಣ್ಯರು ಉಪಸ್ಥಿತರಿದ್ದರು. ಅಂತಿಮ ಕ್ರಿಯೆಯ ವಿಧಿ ವಿಧಾನ ನಡೆಯುವ ವೇಳೆ ಕೊನೆಯ ಕ್ಷಣದಲ್ಲಿ ಬಿಜೆಪಿ ಹಿರಿಯ ನಾಯಕ, ಅನಂತ ಕುಮಾರ್ ರಾಜಕೀಯ ಗುರು ಎಲ್ ಕೆ ಅಡ್ವಾಣಿ,  ಬಿಜೆಪಿ ರಾಷ್ಟ್ರೀಯ ಅಧ‍್ಯಕ್ಷ ಅಮಿತ್ ಶಾ,  ಗೃಹ ಸಚಿವ ರಾಜನಾಥ್ ಸಿಂಗ್ ಆಗಮಿಸಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ನಿನ್ನೆಯಿಂದ ಸಮಚಿತ್ತದಿಂದಿದ್ದು, ತಮ್ಮ ದುಃಖ ಎಲ್ಲೂ ತೋರಿಸಿಕೊಳ್ಳದ ಅನಂತ ಕುಮಾರ್ ಪತ್ನಿ ತೇಜಸ್ವಿನಿ ಇಂದು ಪತಿಯ ಅಂತ್ಯಕ್ರಿಯೆಯ ವಿಧಿ ವಿಧಾನ ಆರಂಭವಾದಾಗ ದುಃಖ ತಡೆಯಲಾಗದೇ ಬಿಕ್ಕಿ ಬಿಕ್ಕಿ ಅತ್ತರು.

ಪುರೋಹಿತ ಶ್ರೀನಾಥ್ ನೇತೃತ್ವದಲ್ಲಿ ಅಶ್ವಲಾಯನ ಸ್ಮಾರ್ತ ಸಂಪ್ರದಾಯದಂತೆ ವಿಧಿವಿಧಾನ ನೆರವೇರಿಸಲಾಯಿತು. ಅಂತಿಮ ಕ್ರಿಯೆ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಪಿಯೂಷ್ ಗೋಯಲ್, ನಿರ್ಮಲಾ ಸೀತಾರಾಂ, ಡಿವಿ ಸದಾನಂದ ಗೌಡ, ರವಿಶಂಕರ್ ಪ್ರಸಾದ್, ಸಚಿವ ಡಿಕೆ ಶಿವಕುಮಾರ್, ಶಾಸಕರಾದ ದಿನೇಶ್ ಗುಂಡೂರಾವ್, ಬಸವರಾಜ ಹೊರಟ್ಟಿ, ಆರ್ ಅಶೋಕ್, ವಿ ಸೋಮಣ್ಣ, ರವಿ ಸುಬ್ರಹ್ಮಣ್ಯ ಮುಂತಾದ ರಾಜಕೀಯ ಗಣ್ಯರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments