Select Your Language

Notifications

webdunia
webdunia
webdunia
webdunia

ಅನಂತಕುಮಾರ್ ಅವರ ಸೇವಾಗುಣ ಎಲ್ಲರಿಗೂ ಪ್ರೇರಣೆ: ಬಸವರಾಜ ಬೊಮ್ಮಾಯಿ

ಅನಂತಕುಮಾರ್ ಅವರ ಸೇವಾಗುಣ ಎಲ್ಲರಿಗೂ ಪ್ರೇರಣೆ: ಬಸವರಾಜ ಬೊಮ್ಮಾಯಿ
bangalore , ಬುಧವಾರ, 22 ಸೆಪ್ಟಂಬರ್ 2021 (22:11 IST)
ಸಾಧನಿಕಗೆ ಸಾವು ಅಂತ್ಯವಲ್ಲ. ಸಾವಿನ ನಂತರವೂ ಅವರು ಬದುಕುತ್ತಾರೆ. ದಿ.ಅನಂತಕುಮಾರ್ ಅವರ ಸೇವಾ ಗುಣದಿಂದಲೇ ಇನ್ನೂ ಜನರ ಮನಸ್ಸಿನಲ್ಲಿ ಜೀವಂತವಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅದಮ್ಯ ಚೇತನ, ಅನಂತಕುಮಾರ ಪ್ರತಿಷ್ಠಾನ ಆಯೋಜಿಸಿದ್ದ ಕೇಂದ್ರದ ಮಾಜಿ ಸಚಿವ ದಿ. ಅನಂತಕುಮಾರ್ ಅವರ 62ನೇ ಜನ್ಮ ದಿನಾಚರಣೆಯ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ವಿವೇಕಾನಂದರು ಹೇಳಿದಂತೆ ಸಾಧನಿಕಗೆ ಸಾವು ಅಂತ್ಯವಲ್ಲ. ಸಾವಿನ ನಂತರವೂ ಅವರು ಬದುಕುತ್ತಾರೆ. ಅನಂತಕುಮಾರ್ ಅವರ ಸೇವಾ ಜೀವನ , ಅವರ ಸೇವಾ ಗುಣ ಮತ್ತು ಅವರ ಸಂಬಂಧಗಳೆಲ್ಲವೂ ಸೇವೆಯಿಂದ ಕೂಡಿದೆ ಎಂದರು.
ರಾಜಕಾರಣಿಗೆ ಕೇವಲ ರಾಜಕಾರಣ, ಸರ್ಕಾರದ ಕೆಲಸದ ಜೊತೆಗೆ ಜನಪರ ಕೆಲಸ ಮಾಡಿದರೆ ಅವರೆಂದೂ ನಿವೃತ್ತಿ ಆಗುವುದಿಲ್ಲ. ಆ ಕೆಲಸವನ್ನು ಅನಂತಕುಮಾರ್ ಮಾಡಿದ್ದಾರೆ. ರಾಷ್ಟಮಟ್ಟದಲ್ಲಿ ವಾಜಪೇಯಿಯವರ  ನೇತೃತ್ವದಲ್ಲಿ ಭೂಮಿಯಿಂದ ಆಕಾಶದವರೆಗೂ ಅವರ ಸೇವೆ ಇದೆ. ಬೇವುಲೇಪಿತ ಯೂರಿಯಾ, ಕಡಿಮೆ ಬೆಲೆಯಲ್ಲಿ ಗೊಬ್ಬರ , ಜನೌಷಧ ಕೇಂದ್ರ ಹೀಗೆ ಅನೇಕ ಕಾರ್ಯಕ್ರಮಗಳನ್ನು  ದೇಶದ ಜನರಿಗೆ ನೀಡಿದ್ದಾರೆ.   
ಸದಾ ಕಾಲ ಪ್ರರಣೆ ನೀಡುವ ಅನಂತಕುಮಾರ್  ಅವರು ಹಾಕಿಕೊಟ್ಟ ಸೇವಾ ಗುಣದ ಮಾರ್ಗದಲ್ಲಿ ನಡೆಯುವ ಮೂಲಕ ಅವರಿಗೆ ಗೌರವವನ್ನು ಸಲ್ಲಿಸಬೇಕು. ಜನಸೇವೆಯ ಹಾದಿಯಲ್ಲಿಯೇ ತೇಜಸ್ವಿನಿ ಅನಂತಕುಮಾರ್ ಅವರು ನಡೆಯುತ್ತಿದ್ದಾರೆ. ಅದಮ್ಯ ಚೇತನ ಅನಂತಕುಮಾರ್ ಸೇವಾ ಪ್ರತಿಷ್ಠಾನದ ಸಮಾಜಮುಖಿ ಕಾರ್ಯಕ್ರಮಕ್ಕೆ ಸರ್ಕಾರದ ಬೆಂಬಲ ಸದಾ ಇರಲಿದೆ ಎಂದು ತಿಳಿಸಿದರು.
ಅನಂತಕುಮಾರ್ ಅವರದು ಚೈತನ್ಯಶೀಲ, ಪ್ರೇರಣಾದಾಯಕ ವ್ಯಕ್ತಿತ್ವ. ಕಾಲೇಜು ದಿನಗಳಿಂದಲೂ ಸಂಘಟನಾ ಚತುರರಾಗಿ ವೈಚಾರಿಕವಾಗಿ ಸ್ಪಷ್ಟತೆಯನ್ನು ಹೊಂದಿದ್ದರು. ಕೇಂದ್ರಸರ್ಕಾರದ ದಿಟ್ಟ ನಿರ್ಧಾರಗಳಾದ ಸಂವಿಧಾನದ
370 ನೆ ವಿಧಿ ರದ್ದು, ಜಿಎಸ್‌ಟಿ ಮಸೂದೆ ಕರಡು ರಚಿಸುವುದರಲ್ಲಿ ದೊಡ್ಡ ಪಾತ್ರ ವಹಿಸಿದ್ದಾರೆ ಎಂದರು.
ಅದಮ್ಯ ಚೇತನದಿಂದ ಸೇವಾ ಕಾರ್ಯ:
ಅದಮ್ಯ ಚೇತನ ಸೇವಾ ಸಂಸ್ಥೆ, ಮಧ್ಯಾಹ್ನದ ಊಟ ಹಾಗೂ ಶಾಲಾ ಮಕ್ಕಳಿಗೆ ಆಹಾರ ಸುರಕ್ಷತೆ ನೀಡುವ ಸಾರ್ಥಕ ಕಾರ್ಯ ಮಾಡುತ್ತಿದ್ದು,  ರಾಜಸ್ತಾನ, ಕರ್ನಾಟಕ ಹಾಗೂ ಇತರೆ ರಾಜ್ಯಗಳಲ್ಲಿ ಸಂಸ್ಥೆ ಬೆಳೆದು ನಿಂತಿದೆ. ಲಕ್ಷಾಂತರ ಮಕ್ಕಳಿದ್ದಾರೆ ಅವರು ನನ್ನ ಮಕ್ಕಳು. ಅವರಿಗೆ ಆಹಾರವನ್ನು ಕೊಡುವುದು ನನ್ನ ಕೆಲಸ ಎಂದು ಅನಂತಕುಮಾರ್ ನುಡಿಯುತ್ತಿದ್ದರು. ಸಸ್ಯಾಗ್ರಹ ಕಾರ್ಯಕ್ರಮದಿಂದ ಬೆಂಗಳೂರು ನಗರದಲ್ಲಿ ಸಸಿಗಳನ್ನು ನೆಡುವ ಮುಖಾಂತರ ಒಂದು ಆಂದೋಲನ ರೂಪಿಸಿದರು ಎಂದರು.
ಬಡವರಿಗೆ ಮನೆ ನಿರ್ಮಾಣ:
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾತನಾಡಿ, ಅದಮ್ಯ ಚೇತನ ಮೂಲಕ ಲಕ್ಷಾಂತರ ಮಕ್ಕಳಿಗೆ ಆಹಾರ ನೀಡುತ್ತಿದ್ದಾರೆ. ಅನಂತ ಕುಮಾರ್ ಅವರು ವಾಲ್ಮೀಕಿ - ಅಂಬೇಡ್ಕರ್ ಯೋಜನೆ ಜಾರಿ ತಂದು ಬಡವರಿಗೆ ಮನೆ ನಿರ್ಮಾಣ ಮಾಡಿದರು.‌ ರೈತರಿಗೆ ಸುಲಭವಾಗಿ ಗೊಬ್ಬರ ಸಿಗುವಂತೆ ಮಾಡಿದರು. ಜೀವಿತಾವಧಿಯಲ್ಲಿ ಕೆಲಸ ಮಾಡಿರುವುದು ಜನರ ಮನಸ್ಸಿನಲ್ಲಿ ಉಳಿದಿದೆ. ಅವರ ಸಾಮಾಜಿಕ ಕಾರ್ಯವನ್ನು ಮಾದರಿ ಹಾಗೂ ಸ್ಫೂರ್ತಿ ಯಾಗಿದೆ. 
ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ವಸತಿ ಸಚಿವ ವಿ. ಸೋಮಣ್ಣ, ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್, ಅದಮ್ಯ ಚೇತನ ಸಂಸ್ಥೆಯ ಮುಖಸ್ಥೆ ತೇಜಸ್ವಿನಿ ಅನಂತಕುಮಾರ್ ಸೇರಿ ಮತ್ತಿತರರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಕೊಡವರಿಗೆ ಬಂದೂಕು ಇರಿಸಿಕೊಳ್ಳಲು ಪರವಾನಿಗೆ ಪಡೆಯುವುದಕ್ಕೆ ವಿನಾಯಿತಿ