ಯಾರಿಗೆ ಯಾವ ಭಾಷೆಯಲ್ಲಿ ಮಾತನಾಡಬೇಕು ಎಂದು ನನಗೆ ಗೊತ್ತಿದೆ: ಅನಂತಕುಮಾರ್ ಹೆಗ್ಡೆ

Krishnaveni K
ಮಂಗಳವಾರ, 16 ಜನವರಿ 2024 (11:28 IST)
Photo Courtesy: Twitter
ಬೆಂಗಳೂರು: ಉತ್ತರ ಕನ್ನಡ ಬಿಜೆಪಿ ಸಂಸದ ಅನಂತ ಕುಮಾರ್ ಹೆಗ್ಡೆ ಮತ್ತೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೊನ್ನೆಯಷ್ಟೇ ಅನಂತ್ ಕುಮಾರ್ ಹೆಗ್ಡೆ ಏಕವಚನದಲ್ಲಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ಬಿಜೆಪಿ ನಾಯಕರೂ ಕೆಲವರು ಅನಂತ ಕುಮಾರ್ ಹೆಗ್ಡೆ ಹೇಳಿಕೆಗಳನ್ನು ವಿರೋಧಿಸಿದ್ದರು. ಇದು ಪಕ್ಷದ ಹೇಳಿಕೆಯಲ್ಲ ಎಂದು ಅಂತರ ಕಾಯ್ದುಕೊಂಡಿದ್ದಾರೆ.

ಅನಂತಕುಮಾರ್ ಹೆಗ್ಡೆಗೆ ತಿರುಗೇಟು ನೀಡಿದ್ದ ಸಿದ್ದರಾಮಯ್ಯ ಸಂಸ್ಕೃತಿ ಇಲ್ಲದ ಮನುಷ್ಯ ಎಂದು ವಾಗ್ದಾಳಿ ನಡೆಸಿದ್ದರು. ಅದಕ್ಕೆ ತಿರುಗೇಟು ನೀಡಿರುವ ಅನಂತಕುಮಾರ್ ಹೆಗ್ಡೆ, ಸಂಸ್ಕೃತಿ, ಸಭ್ಯತೆ ಎಂದರೆ ಏನು ಎಂದು ನಾನು ಸಿದ್ದರಾಮಯ್ಯಗೆ ಪಾಠ ಮಾಡ್ತೀನಿ. ಯಾರಿಗೆ ಯಾವ ಭಾಷೆಯಲ್ಲಿ ಹೇಳಬೇಕು ಅದೇ ಭಾಷೆಯಲ್ಲಿ ಹೇಳಬೇಕು. ಸಭ್ಯತೆ ಅಂದರೆ ಏನು ಎಂದು ಮೊದಲು ಅವರು ತಿಳಿದುಕೊಳ್ಳಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಮೊದಲು ಮೋದಿಯವರಿಗೆ ಸಿದ್ದರಾಮಯ್ಯ ಮಾಸ್ ಮರ್ಡರರ್ ಎಂದಿದ್ದರು. ಅವರಿಗೊಂದು ನ್ಯಾಯ ನಮಗೊಂದು ನ್ಯಾಯನಾ? ಎಂದು ಅನಂತ್ ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಬಿಹಾರದ ಶೀತ್ಲಾದೇವಿ ದೇವಾಲಯದಲ್ಲಿ ಕಾಲ್ತುಳಿತ: 8 ಮಂದಿ ಸಾವು, ಹಲವರಿಗೆ ಗಾಯ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

Video: ಪತ್ನಿಯನ್ನು ಬೈಕ್ ನಿಂದ ತಳ್ಳಿ ಕೊಂದ ಪತಿ: ಶಾಕಿಂಗ್ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Video: ಬಿಟ್ಟಿ ಹಣ್ಣು ತಿಂದಿದ್ದಲ್ಲದೆ ದುಡ್ಡು ಕೇಳಿದ್ದಕ್ಕೆ ಪೊಲೀಸಪ್ಪನ ಆಟಾಟೋಪ ನೋಡಿ

ರಾಹುಲ್ ಗಾಂಧಿ ನಕ್ಸಲ್ ಬೆಂಬಲಿಗರ ಜೊತೆ ವೇದಿಕೆ ಹಂಚಿಕೊಳ್ತಾರೆ: ಅಮಿತ್ ಶಾ ವಾಗ್ದಾಳಿ

ಮುಂದಿನ ಸುದ್ದಿ
Show comments