Select Your Language

Notifications

webdunia
webdunia
webdunia
webdunia

ಅನಂತ್ ಕುಮಾರ್ ಯಾವಾಗ ನಿಜ ಹೇಳಿದ್ದಾರೆ?: ಸಿಎಂ ಸಿದ್ದರಾಮಯ್ಯ

ಅನಂತ್ ಕುಮಾರ್ ಯಾವಾಗ ನಿಜ ಹೇಳಿದ್ದಾರೆ?: ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಶನಿವಾರ, 6 ಮೇ 2017 (16:19 IST)
ಕೇಂದ್ರ ಸರಕಾರದಿಂದ ಬದ ಬರಗಾಲದ ಹಣವನ್ನು ರಾಜ್ಯ ಸರಕಾರ ಸಮರ್ಪಕವಾಗಿ ಬಳಸಿಕೊಂಡಿಲ್ಲ ಎನ್ನುವ ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿಕೆಗೆ ಗರಂ ಆಗಿರುವ ಸಿಎಂ ಸಿದ್ದರಾಮಯ್ಯ, ಅನಂತ್ ಕುಮಾರ್ ಯಾವಾಗ ನಿಜ ಹೇಳಿದ್ದಾರೆ? ಎಂದು ತಿರುಗೇಟು ನೀಡಿದ್ದಾರೆ.
 
ಕೇಂದ್ರ ಸರಕಾರದಿಂದ ಬಂದ ಬರಗಾಲದ ಅನುದಾನದ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗಿದೆ. ಕೊನೆಗಳಿಗೆಯಲ್ಲಿ ಮತ್ತಷ್ಟು ಬೇಡಿಕೆ ಬರುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಶೇ.20 ರಷ್ಟು ಹಣವನ್ನು ಉಳಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
 
ಕೇಂದ್ರದಿಂದ ಬಂದಿದ್ದ 1 ಸಾವಿರ ಕೋಟಿ ರೂಪಾಯಿಗಳನ್ನು ಬರಗಾಲದ ಕಾಮಗಾರಿಗಳಿಗಾಗಿ ಬಳಸಿಕೊಳ್ಳಲಾಗಿದೆ. ಉಳದ ಹಣವನ್ನು ಆದ್ಯತೆ ಮೇರೆಗೆ ಉಪಯೋಗಿಸಲಾಗುತ್ತದೆ ಎಂದರು.
 
ಬಿಜೆಪಿ ನಾಯಕರಿಗೆ ಸುಳ್ಳು ಹೇಳುವುದೇ ಕಾಯಕವಾಗಿದೆ. ರಾಜ್ಯ ಸರಕಾರದ ಹಲವಾರು ಜನಪರ ಕಾರ್ಯಕ್ರಮಗಳಿಗೆ ಕೂಡಾ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕೆ.ಎಸ್.ಈಶ್ವರಪ್ಪರತ್ತ ಸುಳಿಯದ ಪ್ರಮುಖ ಮುಖಂಡರು