Webdunia - Bharat's app for daily news and videos

Install App

ದೇವರ ಜಾತ್ರೆಯಲ್ಲಿ ಚರಂಡಿಗೆ ಬಿದ್ದ ಎತ್ತಿನ ಬಂಡಿ; ಮುಂದೇನಾಯ್ತು?

Webdunia
ಬುಧವಾರ, 13 ಫೆಬ್ರವರಿ 2019 (13:07 IST)
ದೇವರ ರಥೋತ್ಸವದ ಸಂದರ್ಭದಲ್ಲಿ ಪಾನಕದ ಎತ್ತಿನಗಾಡಿಯೊಂದು ಚರಂಡಿಗೆ ಬಿದ್ದ ಘಟನೆ ನಡೆದಿದೆ.

ಬೀರೂರಿನ ಗ್ರಾಮ ದೇವತೆ  ಅಂತರಘಟ್ಟಮ್ಮ ದೇವರ ರಥೋತ್ಸವದ ವೇಳೆ ಪಾನಕದ ಎತ್ತಿನ ಗಾಡಿಯೊಂದು ಚರಂಡಿಗೆ ಉರುಳಿ ಬಿದ್ದ ಪರಿಣಾಮ ಓರ್ವನ ಪರಿಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬೀರೂರು ಪಟ್ಟಣದ ಶಿವಾಜಿನಗರದ ಆಲದಮರದ ತಿರುವಿನಲ್ಲಿ ಘಟನೆ ನಡೆದಿದ್ದು, ಹಲವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಥೋತ್ಸವದ ವೇಳೆ ಸುಮಾರು 50ಕ್ಕೂ ಹೆಚ್ಚು ಪಾನಕದ ಗಾಡಿಗಳನ್ನು ಓಡಿಸಲಾಯಿತು.

ಈ ವೇಳೆ ಒಂದು ಎತ್ತಿನಗಾಡಿ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದೆ. ಈ ವೇಳೆ  ಚಂದ್ರೋಜಿರಾವ್, ತಿಮ್ಮಣ್ಣ ಎಂಬುವರ ತಲೆಗೆ ತೀವ್ರ ಪ್ರಮಾಣದಲ್ಲಿ ಪೆಟ್ಟಾದ ಪರಿಣಾಮ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments