Webdunia - Bharat's app for daily news and videos

Install App

ಹಬ್ಬಕ್ಕೆಂದು ಊರಿಗೆ ಬಂದವ ಸ್ನೇಹಿತನಿಂದಲೇ ಅಂದರ್!

Webdunia
ಸೋಮವಾರ, 5 ಸೆಪ್ಟಂಬರ್ 2022 (12:29 IST)
ಬಾಗಲಕೋಟೆ : ಹಬ್ಬದ ರಜೆ ಹಿನ್ನೆಲೆಯಲ್ಲಿ ಊರಿಗೆ ಬಂದ ಯುವಕನನ್ನು ಆತನ ಸ್ನೇಹಿತರೇ ಹತ್ಯೆಗೈದಿರುವ ಘಟನೆ ಜಿಲ್ಲೆಯ ಮುಧೋಳ ನಗರದ ಮಲ್ಲಮ್ಮ ನಗರದಲ್ಲಿ ನಡೆದಿದೆ.

ಮೃತ ಯುವಕನನ್ನು ಮೆಹಬೂಬ್(22) ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ಮೆಹಬೂಬ್ ಅನ್ನು ಆತನ ಸ್ನೇಹಿತ ಭದ್ರೇಶ್ ಹತ್ಯೆಗೈದಿದ್ದಾನೆ. ಬೀಳಗಿ ತಾಲೂಕಿನ ತೆಗ್ಗಿ ಗ್ರಾಮದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಮೆಹಬೂಬ್, ಪ್ರತಿ ಹಬ್ಬದ ದಿನಗಳಲ್ಲಿ ರಜೆ ಸಿಗುತ್ತಿದ್ದ ಹಿನ್ನೆಲೆಯಲ್ಲಿ ತನ್ನ ಊರಿಗೆ ಬರುತ್ತಿದ್ದನು.

ಹೀಗೆ ಬಂದ ಮೆಹಬೂಬ್ನನ್ನು ಸ್ನೇಹಿತ ಭದ್ರೇಶ್ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಇತ್ತ ಮನೆಗೆ ಆಧಾರಸ್ತಂಭವಾಗಿದ್ದ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಟುಂಬ ಆಗ್ರಹಿಸಿದೆ.

ಕಳೆದ 5 ವರ್ಷದ ಹಿಂದೆ ಭದ್ರೇಶ್ ಮತ್ತು ಮೆಹಬೂಬ್ ನಡುವೆ ಸಣ್ಣ ಜಗಳವಾಗಿತ್ತು. ಇದೇ ಸೇಡು ಇಟ್ಟಕೊಂಡಿದ್ದ ಭದ್ರೇಶ್, ಮೊನ್ನೆ ರಾತ್ರಿ ಅಂಗನವಾಡಿ ಬಳಿ ಸ್ನೇಹಿತರೊಟ್ಟಿಗೆ ಕೂತಿದ್ದ ಮಹಬೂಬ್ಗೆ ಎದೆ, ಕುತ್ತಿಗೆ, ಹೊಟ್ಟೆ ಸೇರಿ ಹಲವೆಡೆ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments