Webdunia - Bharat's app for daily news and videos

Install App

ಆಂಧ್ರ ಕಾಂಗ್ರೆಸ್ ನಾಯಕಿ ಶರ್ಮಿಳಾ-ಡಿಕೆ ಶಿವಕುಮಾರ್ ಗುಪ್ತ್ ಗುಪ್ತ್ ಮೀಟಿಂಗ್

Krishnaveni K
ಬುಧವಾರ, 10 ಏಪ್ರಿಲ್ 2024 (14:23 IST)
ಬೆಂಗಳೂರು: ಆಂಧ್ರ ಪ್ರದೇಶ ಕಾಂಗ್ರೆಸ್ ನಾಯಕಿ ವೈಎಸ್ ಶರ್ಮಿಳಾ ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ದಿಡೀರ್ ಆಗಿ ಭೇಟಿಯಾಗಿದ್ದಾರೆ.

ಸದಾಶಿವನಗರದ ಡಿಕೆ ಶಿವಕುಮಾರ್ ನಿವಾಸಕ್ಕೆ ಶರ್ಮಿಳಾ ಆಗಮಿಸಿದ್ದಾರೆ. ಈ ವೇಳೆ ಇಬ್ಬರೂ ಕೆಲವು ಹೊತ್ತು ಮಹತ್ವದ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಡಿಕೆಶಿ ಸಹೋದರ ಡಿಕೆ ಸುರೇಶ್ ಕೂಡಾ ಉಪಸ್ಥಿತರಿದ್ದರು.

ತಮ್ಮಿಬ್ಬರ ಭೇಟಿಯ ಮುಖ್ಯ ಉದ್ದೇಶವೇನು ಎಂಬುದನ್ನು ಇಬ್ಬರೂ ಮಾಧ್ಯಮಗಳ ಮುಂದೆ ಗುಟ್ಟ ಬಿಟ್ಟುಕೊಟ್ಟಿಲ್ಲ. ಈ ಮೊದಲು ತಮ್ಮದೇ ಪಕ್ಷ ಸ್ಥಾಪಿಸಿದ್ದ ಶರ್ಮಿಳಾ ಇತ್ತೀಚೆಗಷ್ಟೇ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು. ಅವರ ಸೇರ್ಪಡೆ ಆಂಧ್ರದಲ್ಲಿ ದೊಡ್ಡ ಬಲ ಬಂದಂತಾಗಿತ್ತು.

ಶರ್ಮಿಳಾ ಆಂಧ‍್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಕಿರಿಯ ಸಹೋದರಿ. ಇದೀಗ ಲೋಕಸಭೆ ಚುನಾವಣೆಯಲ್ಲಿ ಆಂಧ್ರದಲ್ಲಿ ಕಾಂಗ್ರೆಸ್ ನ ಉಸ್ತುವಾರಿ ವಹಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments