Webdunia - Bharat's app for daily news and videos

Install App

ಬೆಂಗಳೂರು ರೇವ್ ಪಾರ್ಟಿ: ಆಂಧ್ರ ಶಾಸಕರ ಆಪ್ತರು ವಶಕ್ಕೆ

Krishnaveni K
ಶನಿವಾರ, 25 ಮೇ 2024 (10:06 IST)
Photo Courtesy: X
ಬೆಂಗಳೂರು: ಜಿಆರ್ ಫಾರ್ಮ್ ಹೌಸ್ ನಲ್ಲಿ ಮೊನ್ನೆಯಷ್ಟೇ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಇಬ್ಬರು ಶಾಸಕರ ಆಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಾಸಕ ಗೋವರ್ಧನ ರೆಡ್ಡಿ ಮತ್ತು ಶ್ರೀಕಾಂತ್ ರೆಡ್ಡಿ ಆಪ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ರೇವ್ ಪಾರ್ಟಿ ನಡೆದ ಸ್ಥಳದಲ್ಲಿ ಕಾರೊಂದು ಪತ್ತೆಯಾಗಿತ್ತು. ಇದರಲ್ಲಿ ಶಾಸಕರ ಪಾಸ್ ಇತ್ತು. ಈ ಅನುಮಾನದ ಜಾಡು ಹಿಡಿದ ಪೊಲೀಸರು ಈಗ ಶಾಸಕರ ಆಪ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇನ್ನೊಂದೆಡೆ ರೇವ್ ಪಾರ್ಟಿ ಸಂಬಂಧ ಶಾಸಕ ಗೋವರ್ಧನ ರೆಡ್ಡಿಯೂ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂದು ಟಿಡಿಪಿ ಆರೋಪಿಸಿದೆ. ಈ ಸಂಬಂಧ ಗೋವರ್ಧನ ರೆಡ್ಡಿ ರಕ್ತದ ಮಾದರಿ ಪರೀಕ್ಷೆಗೆ ನೀಡಲಿ ಎಂದು ಸವಾಲು ಹಾಕಿದೆ. ಆದರೆ ರೇವ್ ಪಾರ್ಟಿಯಲ್ಲಿ ನನ್ನ ಪಾತ್ರವಿಲ್ಲ ಎಂದು ಗೋವರ್ಧನ ರೆಡ್ಡಿ ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

ಬೆಂಗಳೂರು ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಈಗಾಗಲೇ ನಟಿ ಹೇಮಾ, ಆಶಿ ರಾಯ್ ಸೇರಿದಂತೆ ಹಲವು ಗಣ್ಯರ ಹೆಸರುಗಳು ಕೇಳಿಬಂದಿವೆ. ಹೇಮ, ಆಶಿ ರಾಯ್ ಸೇರಿದಂತೆ 83 ಮಂದಿಯ ರಕ್ತದ ಮಾದರಿ ಪರೀಕ್ಷಿಸಿದಾಗ ಪಾಸಿಟಿವ್ ರಿಪೋರ್ಟ್ ಬಂದಿತ್ತು. ಇದರ ನಡುವೆ ಪಾರ್ಟಿ ಆಯೋಜಕರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments