Webdunia - Bharat's app for daily news and videos

Install App

ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳವಿಲ್ಲ, ಮಕ್ಕಳಿಗೆ ಚಿಕ್ಕಿಯೂ ಕೊಡ್ತಿಲ್ಲ: ಎಲ್ಲಾ ಗ್ಯಾರಂಟಿ ಮಹಿಮೆ

Krishnaveni K
ಮಂಗಳವಾರ, 15 ಅಕ್ಟೋಬರ್ 2024 (08:53 IST)
Photo Credit: BJP X
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಬಂದಿಲ್ಲ. ಮಕ್ಕಳಿಗೆ ಕೊಡ್ತಿದ್ದ ಪೌಷ್ಠಿಕ ಆಹಾರ, ಚಿಕ್ಕಿ ಕೂಡಾ ಬಂದ್ ಆಗಿದೆ. ಎಲ್ಲವೂ ಗ್ಯಾರಂಟಿ ಮಹಿಮೆ ಎಂಬ ಆರೋಪ ಕೇಳಿಬರುತ್ತಿದೆ.

ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಸಂಬಳಕ್ಕೆ ಕತ್ತರಿ ಹಾಕಿರುವುದು ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಕೂಡಾ ಪ್ರಶ್ನೆ ಮಾಡಿದ್ದು, ಇದು ರಾಜ್ಯ ಸರ್ಕಾರ ದಿವಾಳಿಯಾಗಿರುವುದಕ್ಕೆ ಸಾಕ್ಷಿ ಎಂದು ಟೀಕೆ ಮಾಡಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು 3-4 ತಿಂಗಳಿನಿಂದ ಸಂಬಳವನ್ನೇ ನೀಡಿಲ್ಲ ಎಂದು ಆರೋಪಿಸಿದೆ.

ಈ ಮೊದಲು ಅಂಗನವಾಡಿ ವಿದ್ಯಾರ್ಥಿಗಳಿಗೆ ಪ್ರತೀ ತಿಂಗಳಿಗೊಮ್ಮೆ ಹೆಸರುಕಾಳು ಸೇರಿದಂತೆ ಪೌಷ್ಠಿಕ ಆಹಾರ ನೀಡಲಾಗುತ್ತಿತ್ತು. ಪ್ರತಿನಿತ್ಯ ಚಿಕ್ಕಿ ನೀಡಿ ಕಳುಹಿಸಲಾಗುತ್ತಿತ್ತು. ಆದರೆ ಈಗ ಅದೆಲ್ಲವೂ ಬಂದ್ ಆಗಿದೆ. ಮಧ್ಯಾಹ್ನ ಊಟ ಮಾತ್ರ ನೀಡಲಾಗುತ್ತಿದೆ. ಗ್ಯಾರಂಟಿ ಯೋಜನೆ ಬಂದ ಮೇಲೆ ರಾಜ್ಯ ಸರ್ಕಾರ ಇವೆಲ್ಲದಕ್ಕೂ ಸದ್ದಿಲ್ಲದೇ ಕತ್ತರಿ ಹಾಕಿದೆ.

ಇದೀಗ ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳವೂ ಆಗುತ್ತಿಲ್ಲ ಎಂಬ ಅರೋಪ ಕೇಳಿಬಂದಿದೆ. ದೇಶದ್ರೋಹಿಗಳ ಬಿಡುಗಡೆಗೆ ಮಿಡಿಯುವ ಸಿದ್ದರಾಮಯ್ಯನವರು, ಬಡಪಾಯಿ ಅಂಗನವಾಡಿ ಕಾರ್ಯಕರ್ತರ ಸಂಬಳದ ವಿಚಾರಕ್ಕೆ ಯಾಕೆ ಸ್ಪಂದಿಸುತ್ತಿಲ್ಲ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜವಾಬ್ಧಾರಿ ಮರೆತಿದ್ದು ಯಾಕೆ ಎಂದು ಬಿಜೆಪಿ ಪ್ರಶ್ನೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

MahakumbhMela: ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ 6 ತಿಂಗಳ ಬಳಿಕ ಪತ್ತೆ

Bengaluru: ಇಬ್ಬರು ಮಕ್ಕಳಿದ್ದರು ಮತ್ತೇ ಪ್ರೀತಿಯಲ್ಲಿ ಬಿದ್ದ ಮಹಿಳೆ, ಬದುಕು ದುರಂತ ಅಂತ್ಯ

B Dayanand: ಬಿ ದಯಾನಂದ್ ಎಷ್ಟು ಕರ್ತವ್ಯ ನಿಷ್ಠರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ: ಸಿಎಂ ಸಿದ್ದರಾಮಯ್ಯ

Indore murder: ಖತರ್ನಾಕ್ ಸೋನಮ್ ರಘುವಂಶಿ ಲವ್ವರ್ ಫೋಟೋ ರಿವೀಲ್: ಇವನಿಗಾಗಿ ಇಷ್ಟೆಲ್ಲಾ ಮಾಡಿದ್ಳಾ

ಮುಂದಿನ ಸುದ್ದಿ
Show comments