Webdunia - Bharat's app for daily news and videos

Install App

ಪ್ರಾಣಿಗಳ ಬೇಟೆಗಾರರ ಬಂಧನ

Webdunia
ಗುರುವಾರ, 14 ಜುಲೈ 2022 (14:21 IST)
ಕಾಡುಪ್ರಾಣಿಗಳನ್ನು ಬೇಟೆಯಾಡಲು ಕನಕಪುರ ಸಮೀಪದ ಅರಣ್ಯ ಪ್ರದೇಶಕ್ಕೆ ಹೊರಟಿದ್ದ ಬೆಂಗಳೂರು ಹಾಗೂ ಸುತ್ತಮುತ್ತಲಿನ ಐವರು ಸ್ನೇಹಿತರ ತಂಡವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅವರ ಬಳಿ ಇದ್ದ ಎರಡು ಬಂದೂಕು ಮತ್ತು ಜೀವಂತ ಗುಂಡುಗಳನ್ನು ಜಪ್ತಿ ಮಾಡಿದ್ದಾರೆ.
ಕಾರಿನಲ್ಲಿದ್ದ ತೆರಳುತ್ತಿದ್ದ ಸ್ನೇಹಿತರ ಚಲನವಲನದ ಬಗ್ಗೆ ಅನುಮಾನಗೊಂಡ ಪೊಲೀಸರು ಕಾರನ್ನು ಪರಿಶೀಲಿಸಿದ್ದಾರೆ. ಈ ವೇಳೆ ಅವರ ಬಳಿ ಪರವಾನಗಿ ಷರತ್ತುಗಳನ್ನು ಉಲ್ಲಂಘಿಸಿದ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಈ ಗ್ಯಾಂಗ್‌ನಿಂದ ಡಬಲ್ ಬ್ಯಾರಲ್ ಗನ್, ಒಂದು ಸಿಂಗಲ್ ಬ್ಯಾರೆಲ್ ಗನ್, ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
 
ಅದೃಷ್ಟವಶಾತ್ ಅವರು ಅರಣ್ಯ ಪ್ರದೇಶಕ್ಕೆ ನುಗ್ಗಿ ಯಾವುದೇ ಕಾಡು ಪ್ರಾಣಿಗಳನ್ನು ಕೊಲ್ಲುವ ಮುನ್ನ ಸಿಕ್ಕಿಬಿದ್ದಿದ್ದಾರೆ. ಇವರು ಕಾಡುಪ್ರಾಣಿ ಬೇಟೆಗಾರರು ಎಂದು ಪೊಲೀಸರು ಶಂಕಿಸಿದ್ದಾರೆ. ಸಾಮಾನ್ಯವಾಗಿ ಪ್ರಾಣಿಗಳು ಕಾಣಸಿಗುವ ಕಾಡಿನ ಬಗ್ಗೆ ತಿಳಿದಿರುವ ಸ್ಥಳೀಯ ಬೇಟೆಗಾರನಿಗಾಗಿ ಕಾಯುತ್ತಿದ್ದಾಗ ಈ ಗ್ಯಾಂಗ್ ಸಿಕ್ಕಿಬಿದ್ದಿದೆ.
 
ಬಂಧಿತರನ್ನು ಬಿಡದಿ ನಿವಾಸಿಗಳಾದ ಗೊಟ್ಟಿಗೆರೆಯ ಎ ಅರುಣ್ ಕುಮಾರ್ (42), ಬಿಡದಿಯ ಕೆ ರಾಜಶೇಖರ್ (45), ಎನ್ ರಾಮಕೃಷ್ಣ (36), ಎನ್ ನರಸಿಂಹಮೂರ್ತಿ (33) ಮತ್ತು ಎಂ ನರಸಿಂಹರಾಜು (61) ಎಂದು ಗುರುತಿಸಲಾಗಿದೆ. ಐವರಲ್ಲಿ ರಾಮಕೃಷ್ಣ ಮತ್ತು ನರಸಿಂಹಮೂರ್ತಿ ಸಹೋದರರಾಗಿದ್ದು, ಭಾನುವಾರ ನಸುಕಿನ ಜಾವ 12.15ರ ಸುಮಾರಿಗೆ ಹಾರೋಹಳ್ಳಿ ಸಮೀಪದ ದೊಡ್ಡಮುದವಾಡಿ ಗ್ರಾಮದ ಬಳಿ ಸಿಕ್ಕಿಬಿದ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments