Webdunia - Bharat's app for daily news and videos

Install App

ಪರಿಷತ್ತಿನಲ್ಲಿ ಪ್ರತಿಧ್ವನಿಸಿದ ಸಚಿವ ಆಂಜನೇಯ ಪ್ರಕರಣ

Webdunia
ಶುಕ್ರವಾರ, 27 ನವೆಂಬರ್ 2015 (13:33 IST)
ವಿಧಾನಪರಿಷತ್‌ನಲ್ಲಿ ಸಚಿವ ಆಂಜನೇಯ ಪ್ರಕರಣ ಪ್ರತಿಧ್ವನಿಸಿದೆ. ಈ ಪ್ರಕರಣದ ಪ್ರಸ್ತಾಪವನ್ನು ಬಿಜೆಪಿಯ ಕೆ.ಎಸ್. ಈಶ್ವರಪ್ಪ ಮಂಡಿಸಿದರು. ಈಶ್ವರಪ್ಪ ಪ್ರಸ್ತಾಪಕ್ಕೆ ಕಾಂಗ್ರೆಸ್ ಸದಸ್ಯರು ವಿರೋಧಿಸಿದಾಗ ಆಂಜನೇಯ  ಪ್ರಕರಣ ಗಂಭೀರವೆಂದು ಈಶ್ವರಪ್ಪ ಹೇಳಿದರು. ಆಂಜನೇಯ ಅವರನ್ನು ಸಚಿವಸಂಪುಟದಿಂದ ಕೂಡಲೇ ವಜಾ ಮಾಡುವಂತೆ ಒತ್ತಾಯಿಸಿದರು.

 ಆಂಜನೇಯ ಅವರು ಅಧಿಕೃತ ನಿವಾಸದಲ್ಲಿ ಸುವರ್ಣ ನ್ಯೂಸ್ ಸುದ್ದಿವಾಹಿನಿ ನಡೆಸಿದ ಕಾರ್ಯಾಚರಣೆಯಲ್ಲಿ ಆಂಜನೇಯ ಅವರ ಪತ್ನಿ ಲಂಚ ಸ್ವೀಕರಿಸಿರುವುದು ಬಯಲಾಗಿದೆ. ಇದು ಭ್ರಷ್ಟಾಚಾರದಲ್ಲಿ ತೊಡಗಿಕೊಂಡ ಅತ್ಯಂತ ಗಂಭೀರ ಪ್ರಕರಣವಾಗಿದೆ ಎಂದು ಈಶ್ವರಪ್ಪ ಓದಿ ಹೇಳಿದರು.

 ಸಚಿವ ಆಂಜನೇಯ ಪ್ರಕರಣದ ಚರ್ಚೆಗೆ ಅವರು ನಿಲುವಳಿ ಸೂಚನೆಯನ್ನು ಮಂಡಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯರು ಮತ್ತು ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆದು,  ತೀವ್ರ ಕೋಲಾಹಲ ಉಂಟಾದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಕಲಾಪ ಅನಿರ್ದಿಷ್ಟಾವಧಿಗೆ ಸಭಾಪತಿ ಶಂಕರಮೂರ್ತಿ ಮುಂದೂಡಿದರು. ವಿಧಾನಮಂಡಲದ ಚಳಿಗಾಲದ ಅಧಿವೇಶನ ಮುಕ್ತಾಯವಾಗಿದ್ದು, ವಿಧಾನಸಭೆ ಕಲಾಪವನ್ನು ಸ್ಪೀಕರ್ ಕಾಗೋಡು ತಿಮ್ಮಪ್ಪ ಮುಂದೂಡುವುದರೊಂದಿಗೆ  10 ದಿನಗಳಲ್ಲಿ ಕೇವಲ 24 ಗಂಟೆಗಳು ಕಲಾಪ ನಡೆದಿವೆ. ಪ್ರಸಕ್ತ ಅಧಿವೇಶನದಲ್ಲಿ  6 ವಿಧೇಯಕಗಳು ಅಂಗೀಕಾರವಾಗಿವೆ. ವಿಧಾನಸಭೆ ಕಲಾಪದಲ್ಲಿ ನಾಲ್ಕು ವಿವಿಧ ವರದಿಗಳು ಮಂಡನೆಯಾಗಿವೆ. ಒಂದು ವಿಧೇಯಕವನ್ನು ರಾಜ್ಯಸರ್ಕಾರ ವಾಪಸ್ ಪಡೆದಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments