Webdunia - Bharat's app for daily news and videos

Install App

ಅನ್ನಭಾಗ್ಯದ ಅಕ್ಕಿಯನ್ನೇ ಕನ್ನ ಹೊಡೆದ ಖದೀಮರು

Webdunia
ಮಂಗಳವಾರ, 25 ಅಕ್ಟೋಬರ್ 2016 (19:00 IST)

ರಾಯಚೂರು: ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಹೊರ ರಾಜ್ಯಗಳಿಗೆ ಸಾಗಿಸುತ್ತಿದ್ದ ಮೂರು ಲಾರಿಗಳನ್ನು ಮಾನ್ವಿ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಮಂಗಳವಾರ ಮಧ್ಯಾಹ್ನ ತಾಲೂಕಿನ ಹೊರವಲಯದಲ್ಲಿ ನಡೆದಿದೆ.
 


 

ಮೂರು ಲಾರಿಗಳಲ್ಲಿ ಭರ್ತಿಯಾಗಿ ಅಕ್ಕಿ ತುಂಬಿಸಿಕೊಂಡು ರಾಯಚೂರಿನಿಂದ ಹೊರಟಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಾನ್ವಿ ಪೊಲೀಸರು ಲಕ್ಷಾಂತರ ರು. ಮೌಲ್ಯದ ಅನ್ನ ಭಾಗ್ಯದ ಅಕ್ಕ ಚೀಲವನ್ನು ಲಾರಿ ಸಮೇತ ವಶಪಡಿಸಿಕೊಂಡಿದ್ದಾರೆ. ಸಂದರ್ಭದಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಅವರನ್ನು ವಿಚಾರಣೆಗೆ ಒಳಪಡಿಸಿದಾಗ, ಆ ಮೂರು ಲಾರಿಗಳು ಉದ್ಯಮಿಯೊಬ್ಬರಿಗೆ ಸೇರಿದ್ದು ಎನ್ನುವ ಮಾಹಿತಿ ಬೆಳಕಿಗೆ ಬಂದಿದೆ. ಆ ಮಾಹಿತಿ ಹಿಡಿದು ಹೊರಟಾಗ ಅದೇ ಉದ್ಯಮಿ ಅನ್ನಭಾಗ್ಯ ಯೋಜನೆಯ ಸಾಮಾಗ್ರಿಗಳನ್ನು ಶಾಲೆಗೆ ಸಾಗಿಸುವ ಗುತ್ತಿಗೆ ಪಡೆದಿದ್ದ ಎನ್ನುವ ಮಾಹಿತಿ ಹೊರಬಿದ್ದಿದೆ.

 

ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಸುದ್ದಿ ತಿಳಿಯುತ್ತಿದ್ದಂತೆ ಆಹಾರ ಇಲಾಖೆ ಅಧಿಕಾರಿಗಳು ಮಾನ್ವಿ ಪೊಲೀಸ್ ಠಾಣೆಗೆ ದೌಡಾಯಿಸಿ, ಮಾಹಿತಿ ಸಂಗ್ರಹಿಸಿದ್ದಾರೆ. ಆದರೆ, ಆಹಾರ ಇಲಾಖೆಯ ಅಧಿಕಾರಿಗಳ ಬೆಂಬಲವಿಲ್ಲದೆ ಮೂರು ಲಾರಿಗಳಷ್ಟು ಅನ್ನಭಾಗ್ಯ ಯೋಜನೆಯ ಅಕ್ಕಿಗಳನ್ನು ಸಾಗಾಟ ಮಾಡಲು ಸಾಧ್ಯವಿಲ್ಲ ಎನ್ನುವ ಮಾತುಗಳು ಕೇಳಿಬರುತ್ತಿವೆ. ಅದರ ಸಂಪೂರ್ಣ ತನಿಖೆ ಆಹಾರ ಇಲಾಖೆಯದ್ದೇ ಆಗಿರುವುದರಿಂದ, ಸತ್ಯಾ ಸತ್ಯತೆಗಳು ಹೊರ ಬರುವುದು ದೂರದ ಮಾತು ಎನ್ನುವ ಅಪಸ್ವರ ಮಾನ್ವಿ ಜನತೆಯಿಂದ ಕೇಳಿ ಬರುತ್ತಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್‌ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ

ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಟಿವಿ ಕಾರ್ಯಕ್ರಮಗಳಲ್ಲಿ ಸೈರನ್ ಮೊಳಗಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ

Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್‌, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments