Select Your Language

Notifications

webdunia
webdunia
webdunia
webdunia

ಮುರುಘಾ ಮಠಕ್ಕೆ ಭೇಟಿ ನೀಡಿದ ಅಣ್ಣಾ ಹಜಾರೆ ಹೇಳಿದ್ದೇನು

ಮುರುಘಾ ಮಠಕ್ಕೆ ಭೇಟಿ ನೀಡಿದ ಅಣ್ಣಾ ಹಜಾರೆ ಹೇಳಿದ್ದೇನು
ಚಿತ್ರದುರ್ಗ , ಮಂಗಳವಾರ, 30 ಜನವರಿ 2018 (11:28 IST)

ಸಂವಿಧಾನ ಬದಲಾವಣೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ.

ಚಿತ್ರದುರ್ಗದ ಮುರುಘಾ ಮಠಕ್ಕೆ ಭೇಟಿ ನೀಡಿದ್ದ ಅಣ್ಣಾ ಹಜಾರೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ನಮ್ಮ ಸಂವಿಧಾನ ಅತ್ಯುತ್ತಮವಾಗಿದೆ. ಎಲ್ಲರಿಗೂ ಸಮಾನವಾಗಿ ಬದುಕುವ ಹಕ್ಕು ನೀಡಿದೆ ಎಂದು ತಿಳಿಸಿದ್ದಾರೆ.

ಕೃಷಿ ಕ್ಷೇತ್ರದ ಬಿಕ್ಕಟ್ಟು ಪರಿಹರಿಸುವಲ್ಲಿ ಸರ್ಕಾರಗಳು ವಿಫಲವಾಗಿದ್ದು, ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. 60 ವರ್ಷ ತುಂಬಿದ ರೈತರಿಗೆ ಪಿಂಚಣಿ ನೀಡುವುದು ಹಾಗೂ ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ದೊರಕಿಸಲು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುತ್ತದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕ ಸಿ.ಟಿ.ರವಿ ಅವರಿಗೆ ಕೊಲೆ ಬೆದರಿಕೆ!