Webdunia - Bharat's app for daily news and videos

Install App

ಅಣ್ಣಾಮಲೈ ಕೆಲಸ ಮಾಡಿದ್ದು ಕರ್ನಾಟಕದಲ್ಲಾ, ಪಾಕಿಸ್ತಾನದಲ್ಲಾ: ಪ್ರಿಯಾಂಕ ಖರ್ಗೆ ಆಕ್ರೋಶ

Sampriya
ಸೋಮವಾರ, 22 ಏಪ್ರಿಲ್ 2024 (17:37 IST)
Photo Courtesy X
ಬೆಂಗಳೂರು: ಬಿಜೆಪಿಯ ಅಣ್ಣಾಮಲೈ ಅವರು ಕರ್ನಾಟಕವನ್ನು ಪಾಕಿಸ್ತಾನಕ್ಕೆ ಹೋಲಿಸಿ ಘೋರ ಅವಮಾನ ಮಾಡಿದ್ದಾರೆ, ಅಣ್ಣಾಮಲೈ ತಮ್ಮ ವೃತ್ತಿ ಬದುಕನ್ನು ರೂಪಿಸಿಕೊಂಡಿದ್ದು ಕರ್ನಾಟಕದಲ್ಲಾ, ಪಾಕಿಸ್ತಾನದಲ್ಲಾ ಎಂದು ಕಾಂಗ್ರೆಸ್ ಸಚಿವ ಪ್ರಿಯಾಂಕ ಖರ್ಗೆ ಪ್ರಶ್ನಿಸಿದ್ದಾರೆ.

ಈಚೆಗೆ ಕಾರ್ಯಕ್ರಮವೊಂದರಲ್ಲಿ ಕರ್ನಾಕದ ಖಜಾನೆಯಲ್ಲಿ ದುಡ್ಡೇ ಇಲ್ಲ ಎಂದು ಸಂದರ್ಶಕಿಯೊಬ್ಬರು ಅಣ್ಣಾಮಲೈ ಅವರನ್ನು ಪ್ರಶ್ನಿಸುತ್ತಾರೆ. ಅದಕ್ಕೆ ಪ್ರತಿಕ್ರಿಯಿಸಿದ ಅಣ್ಣಾಮಲೈ ಅವರು, ಕರ್ನಾಟಕದಲ್ಲಿ ಏನಾಗ್ತಿದೆ ಅಂದರೆ ಅಲ್ಲಿ ಪಾಕಿಸ್ತಾನದ ಟೆಕ್ನಿಕ್. ಪಾಕಿಸ್ತಾನ ತನ್ನ ಹಣೆಗೆ ಗನ್ ಇಟ್ಟುಕೊಳ್ಳುತ್ತದೆ. ಆಮೇಲೆ ಪಾಕಿಸ್ತಾನ ಸರ್ಕಾರ ಅಮೇರಿಕಾ ನೋಡಿ ಹೇಳುತ್ತೆ. ನೀವು ನಮಗೆ ದುಡ್ಡು ಕೊಟ್ಟಿಲ್ಲಾಂದ್ರೆ ನಾವು ನಮ್ಮನ್ನೇ ಶೂಟ್ ಮಾಡಿಕೊಳ್ತೇವೆ ಅಂತ. ಪಾಕಿಸ್ತಾನ ತಾನೇ ಸುತ್ತುಹೋಗುವೆ ಅನ್ಸುತ್ತೇ, ಅಮೇರಿಕಾ ಹೆದರಿ ದುಡ್ಡು ಕೊಡುತ್ತೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮಾಡ್ತಿರೋದೂ ಅದೇ. ಗ್ಯಾರೆಂಟಿ ಭರವಸೆ ಕೊಟ್ಟಿದ್ದು ನೀವು, ಗ್ಯಾರೆಂಟಿ ಕೊಡ್ತಿರೋದು ನೀವು. ಈಗ ಕೇಂದ್ರ ಸರ್ಕಾರ ಅದಕ್ಕೆ ಯಾಕೆ ಸಹಾಯ ಮಾಡಬೇಕು ಎಂದು ಹೇಳಿದ್ದರು.  ‌

ಇವರ ಈ ಹೇಳಿಕೆಗೆ ಕಾಂಗ್ರೆಸ್ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಬರೆದು ಅಣ್ಣಾಮಲೈ ವಿರುದ್ಧ ಪ್ರಿಯಾಂಕ ಖರ್ಗೆ ಕಿಡಿಕಾರಿದ್ದಾರೆ.   

ಕರ್ನಾಟಕ ಪಾಕಿಸ್ತಾನದ ರೀತಿಯಂತೆ.
ಬಿಜೆಪಿ ಹಾಗೂ ಅದರ ಮಿತ್ರರು ಕನ್ನಡಿಗರಿಗೆ ಇನ್ನೆಷ್ಟು ಅವಮಾನ ಮಾಡಲು ಯೋಜಿಸಿದ್ದಾರೆ?

ಕರ್ನಾಟಕದ ಮಹಿಳೆಯರನ್ನು ದಾರಿ ತಪ್ಪಿದವರು ಎಂದಾಯ್ತು, ಕನ್ನಡಿಗರನ್ನು ಕುಡುಕರು ಎಂದಾಯ್ತು, ಈಗ ಕನ್ನಡಿಗರು ಪಾಕಿಸ್ತಾನಿಗಳಂತೆ. ಕನ್ನಡಿಗರು ಹಾಗೂ ಕರ್ನಾಟಕವನ್ನು ಅವಮಾನಿಸುವುದು ಬಿಜೆಪಿಗೆ ಸುಲಭದ ಚಟವಾಗಿದೆ.

ಬಿಜೆಪಿಯ ಅಣ್ಣಾಮಲೈ ಅವರು ಕರ್ನಾಟಕವನ್ನು ಪಾಕಿಸ್ತಾನಕ್ಕೆ ಹೋಲಿಸಿ ಘೋರ ಅವಮಾನ ಮಾಡಿದ್ದಾರೆ, ಅಣ್ಣಾಮಲೈ ತಮ್ಮ ವೃತ್ತಿ ಬದುಕನ್ನು ರೂಪಿಸಿಕೊಂಡಿದ್ದು ಕರ್ನಾಟಕದಲ್ಲಾ, ಪಾಕಿಸ್ತಾನದಲ್ಲಾ?

ಅನ್ನ ತಿಂದು, ನೀರು ಕುಡಿದು, ಸಂಬಳ ಪಡೆದು ಬದುಕಿದ್ದು ಕರ್ನಾಟಕದಲ್ಲಾ, ಪಾಕಿಸ್ತಾನದಲ್ಲಾ?
ಈ ಅಣ್ಣಾಮಲೈ ತನ್ನ ಬದುಕಿನಲ್ಲಿ ಐಡೆಂಟಿಟಿ ಪಡೆದದ್ದು ಕರ್ನಾಟಕದಲ್ಲಾ ಪಾಕಿಸ್ತಾನದಲ್ಲಾ?
@BJP4Karnataka
 ನಾಯಕರು ಉತ್ತರಿಸಬೇಕು.

ಕನ್ನಡಿಗರು ಬೆವರು ಸುರಿಸಿ ಕಟ್ಟಿದ ತೆರಿಗೆಯ ಹಕ್ಕನ್ನು ಕೇಂದ್ರದಿಂದ ಕೇಳುತ್ತಿದ್ದಾರೆಯೇ ಹೊರತು ಬಿಕ್ಷೆಯನ್ನಲ್ಲ, ಕರ್ನಾಟಕ ತೆರಿಗೆ ಸಂಗ್ರಹದಲ್ಲಿ 2ನೇ ಅತಿ ದೊಡ್ಡ ರಾಜ್ಯ.
ಕನ್ನಡಿಗರ ಬೆವರಿನ ಹಣದಲ್ಲಿ ಕೇಂದ್ರ ಸರ್ಕಾರ ನಡೆಯುತ್ತಿದೆಯೇ ಹೊರತು ಒಕ್ಕೂಟ ಸರ್ಕಾರದ ಬಿಕ್ಷೆಯಲ್ಲಿ ಕನ್ನಡಿಗರು ಬದುಕುತ್ತಿಲ್ಲ.

ತಮ್ಮ ಹಕ್ಕನ್ನು ಕೇಳುವ ಕನ್ನಡಿಗರನ್ನು ಪಾಕಿಸ್ತಾನಕ್ಕೆ ಹೋಲಿಸುವ ಬಿಜೆಪಿಯನ್ನು ಕನ್ನಡಿಗರು ತಿರಸ್ಕರಿಸುವುದು ನಿಶ್ಚಿತ, ಇಲ್ಲಿ ತಿರಸ್ಕಾರಗೊಂಡವರು ತಮ್ಮ ಪ್ರೀತಿಯ ಪಾಕಿಸ್ತಾನಕ್ಕೆ ಹೋಗಿ ರಾಜಕಾರಣ ಮಾಡಲಿ!<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments