Webdunia - Bharat's app for daily news and videos

Install App

ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ವಾರ್ಷಿಕ ಪರೀಕ್ಷೆ ಆತಂಕ, ಮರು ಪರೀಕ್ಷೆ ಇಲ್ಲ

Webdunia
ಬುಧವಾರ, 23 ಫೆಬ್ರವರಿ 2022 (18:34 IST)
ರಾಜ್ಯದಲ್ಲಿ ಹಿಜಾಬ್ ವಿವಾದ ಇನ್ನೂ ಶಾಂತವಾಗಿಲ್ಲ. ಇದರ ನಡುವೆ ಮಾರ್ಚ್, ಏಪ್ರಿಲ್‌ನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಈಗಾಗಲೇ ಕಾಲೇಜುಗಳಲ್ಲಿ ಹಾಲ್ ಟಿಕೆಟ್ ವಿತರಣೆ ಆರಂಭವಾಗಿದ್ದು, ವಿದ್ಯಾರ್ಥಿನಿಯರು ಕಾಲೇಜಿನ ಒಳಗೆ ಬರಲು ಒಪ್ಪುತ್ತಿಲ್ಲ.
ಇನ್ನು ಇತ್ತೀಚೆಗಷ್ಟೇ ಪಿಯುಸಿ ಪ್ರಾಯೋಗಿಕ ಪರೀಕ್ಷೆ ನಡೆದಿದ್ದು, ಹಿಜಾಬ್ ಕಾರಣದಿಂದ ಪರೀಕ್ಷೆಗೆ ಕೆಲ ಮುಸ್ಲಿಂ ವಿದ್ಯಾರ್ಥಿನಿಯರು ಹಾಜರಾಗಿಲ್ಲ. ಇವರ ಮರುಪರೀಕ್ಷೆಗೆ ಅವಕಾಶ ಇಲ್ಲದಂತಾಗಿದೆ. ಇದೇ ರೀತಿ, ವಾರ್ಷಿಕ ಪರೀಕ್ಷೆಯೂ ಕೈ ತಪ್ಪುವ ಭೀತಿಯನ್ನು ವಿದ್ಯಾರ್ಥಿನಿಯರು ಅನುಭವಿಸುತ್ತಿದ್ದಾರೆ.
ಹಿಜಾಬ್ ತೆಗೆದು ತರಗತಿಗೆ ಬಾರದ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯೂ ಕೈ ತಪ್ಪುವ ಸಾಧ್ಯತೆ ಇದ್ದು, ಇವರಿಗೂ ಮರು ಪರೀಕ್ಷೆಗೆ ಅವಕಾಶ ಇಲ್ಲ. ಹಾಲ್ ಟಿಕೆಟ್ ವಿತರಣೆ ಈಗಾಗಲೇ ಆರಂಭವಾಗಿದ್ದು, ವಿದ್ಯಾರ್ಥಿನಿಯರು ಹಾಲ್ ಟಿಕೆಟ್ ಪಡೆಯಲು ಶಾಲೆ-ಕಾಲೇಜಿಗೆ ಬರುತ್ತಿಲ್ಲ. ಪಿಯು ಬೋರ್ಡ್ ಹಾಲ್ ಟಿಕೆಟ್ ತಿದ್ದುಪಡಿ ಇದ್ದಲ್ಲಿ ಅವಕಾಶ ಕಲ್ಪಿಸಿತ್ತು. ಆದರೆ ತಿದ್ದುಪಡಿ ಪ್ರಕ್ರಿಯೆಯಿಂದಲೇ ವಿದ್ಯಾರ್ಥಿನಿಯರು ಅಂತರ ಕಾಯ್ದುಕೊಂಡಿದ್ದಾರೆ. ಶಿಕ್ಷಣ ಇಲಾಖೆ ಮರು ಪರೀಕ್ಷೆ ನೀಡದಿರಲು ನಿರ್ಧಾರ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments