ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ವಾರ್ಷಿಕ ಪರೀಕ್ಷೆ ಆತಂಕ, ಮರು ಪರೀಕ್ಷೆ ಇಲ್ಲ

Webdunia
ಬುಧವಾರ, 23 ಫೆಬ್ರವರಿ 2022 (18:34 IST)
ರಾಜ್ಯದಲ್ಲಿ ಹಿಜಾಬ್ ವಿವಾದ ಇನ್ನೂ ಶಾಂತವಾಗಿಲ್ಲ. ಇದರ ನಡುವೆ ಮಾರ್ಚ್, ಏಪ್ರಿಲ್‌ನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಈಗಾಗಲೇ ಕಾಲೇಜುಗಳಲ್ಲಿ ಹಾಲ್ ಟಿಕೆಟ್ ವಿತರಣೆ ಆರಂಭವಾಗಿದ್ದು, ವಿದ್ಯಾರ್ಥಿನಿಯರು ಕಾಲೇಜಿನ ಒಳಗೆ ಬರಲು ಒಪ್ಪುತ್ತಿಲ್ಲ.
ಇನ್ನು ಇತ್ತೀಚೆಗಷ್ಟೇ ಪಿಯುಸಿ ಪ್ರಾಯೋಗಿಕ ಪರೀಕ್ಷೆ ನಡೆದಿದ್ದು, ಹಿಜಾಬ್ ಕಾರಣದಿಂದ ಪರೀಕ್ಷೆಗೆ ಕೆಲ ಮುಸ್ಲಿಂ ವಿದ್ಯಾರ್ಥಿನಿಯರು ಹಾಜರಾಗಿಲ್ಲ. ಇವರ ಮರುಪರೀಕ್ಷೆಗೆ ಅವಕಾಶ ಇಲ್ಲದಂತಾಗಿದೆ. ಇದೇ ರೀತಿ, ವಾರ್ಷಿಕ ಪರೀಕ್ಷೆಯೂ ಕೈ ತಪ್ಪುವ ಭೀತಿಯನ್ನು ವಿದ್ಯಾರ್ಥಿನಿಯರು ಅನುಭವಿಸುತ್ತಿದ್ದಾರೆ.
ಹಿಜಾಬ್ ತೆಗೆದು ತರಗತಿಗೆ ಬಾರದ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯೂ ಕೈ ತಪ್ಪುವ ಸಾಧ್ಯತೆ ಇದ್ದು, ಇವರಿಗೂ ಮರು ಪರೀಕ್ಷೆಗೆ ಅವಕಾಶ ಇಲ್ಲ. ಹಾಲ್ ಟಿಕೆಟ್ ವಿತರಣೆ ಈಗಾಗಲೇ ಆರಂಭವಾಗಿದ್ದು, ವಿದ್ಯಾರ್ಥಿನಿಯರು ಹಾಲ್ ಟಿಕೆಟ್ ಪಡೆಯಲು ಶಾಲೆ-ಕಾಲೇಜಿಗೆ ಬರುತ್ತಿಲ್ಲ. ಪಿಯು ಬೋರ್ಡ್ ಹಾಲ್ ಟಿಕೆಟ್ ತಿದ್ದುಪಡಿ ಇದ್ದಲ್ಲಿ ಅವಕಾಶ ಕಲ್ಪಿಸಿತ್ತು. ಆದರೆ ತಿದ್ದುಪಡಿ ಪ್ರಕ್ರಿಯೆಯಿಂದಲೇ ವಿದ್ಯಾರ್ಥಿನಿಯರು ಅಂತರ ಕಾಯ್ದುಕೊಂಡಿದ್ದಾರೆ. ಶಿಕ್ಷಣ ಇಲಾಖೆ ಮರು ಪರೀಕ್ಷೆ ನೀಡದಿರಲು ನಿರ್ಧಾರ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments