Webdunia - Bharat's app for daily news and videos

Install App

ಪ್ರಯಾಣಿಕರಿಗೆ ಮತ್ತೊಂದು ಕಹಿಸುದ್ದಿ: ಖಾಸಗಿ ಬಸ್‌ ದರ ಏರಿಕೆಗೆ ಅವಕಾಶ ಕೋರಿದ ಬಸ್‌ ಮಾಲೀಕರು

Sampriya
ಭಾನುವಾರ, 5 ಜನವರಿ 2025 (12:54 IST)
Photo Courtesy X
ಬೆಂಗಳೂರು: ಸಾರಿಗೆ ಸಂಸ್ಥೆ ಬಸ್‌ಗಳ ಪ್ರಯಾಣ ದರವನ್ನು ಸರ್ಕಾರವು ಮಧ್ಯರಾತ್ರಿಯಿಂದಲೇ ಶೇ 15 ರಷ್ಟು ಹೆಚ್ಚಳ ಮಾಡಿದ ಬೆನ್ನಲ್ಲೇ ಖಾಸಗಿ ಬಸ್ ಗಳ ಮಾಲೀಕರೂ ಪ್ರಯಾಣ ದರ ಹೆಚ್ಚಳಕ್ಕೆ ಅವಕಾಶ ಕೋರಿದ್ದಾರೆ.

ಈ ಬಗ್ಗೆ ಸಾರಿಗೆ ಸಚಿವ ಆರ್.ರಾಮಲಿಂಗಾರೆಡ್ಡಿ ಅವರಿಗೆ ಪತ್ರ ಬರೆದಿರುವ ಶಿವಮೊಗ್ಗ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಆರ್.ರಂಗಪ್ಪ, ಪ್ರಯಾಣ ದರ ಹೆಚ್ಚಳಕ್ಕೆ ಅನುವು ಮಾಡಿಕೊಡುವಂತೆ ಮನವಿ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ಅದರಲ್ಲೂ ಕರ್ನಾಟಕದ ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಸಾರಿಗೆ ಸಂಸ್ಥೆಯ ಬಸ್ ಗಳಿಗೆ ಸರಿ ಸಮವಾಗಿ ಖಾಸಗಿ ಬಸ್ ಗಳೂ ಓಡಾಟ ನಡೆಸುತ್ತಿದ್ದು, ಸಾರ್ವಜನಿಕರಿಗೆ ಬಸ್ ಸೇವೆ ಒದಗಿಸುತ್ತಿವೆ. ಕೋವಿಡ್ ನಂತರ ಖಾಸಗಿ ಬಸ್ ಉದ್ಯಮ ತೀವ್ರ ಸಂಕಷ್ಟಕ್ಕೆ ತುತ್ತಾಗಿದೆ. ರಾಜ್ಯ ಸರ್ಕಾರ ಶಕ್ತಿ ಯೋಜನೆಯಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದರಿಂದ ನಷ್ಟಕ್ಕೀಡಾದ ಹಲವು ಖಾಸಗಿ ಬಸ್ ಕಂಪೆನಿಗಳು ಬಾಗಿಲು ಮುಚ್ಚಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈಗ ಬಿಡಿ ಭಾಗಗಳ ಬೆಲೆ ಹೆಚ್ಚಳ, ಪೆಟ್ರೋಲ್-ಡೀಸೆಲ್ ದರ ಹಾಗೂ ಬಸ್ ಗಳ ನಿರ್ವಹಣೆ ವೆಚ್ಚವೂ ಏರಿಕೆಯಾಗಿದೆ. ಇದರಿಂದ ಖಾಸಗಿ ಬಸ್ ಉದ್ಯಮ ನಡೆಸುವುದು ಕಷ್ಟವಾಗಿದೆ. ಖಾಸಗಿ ಬಸ್ ಗಳನ್ನು ನಂಬಿ ಸಾವಿರಾರು ಕಾರ್ಮಿಕರು ಕೆಲಸ ಮಾಡುತ್ತಿದ್ದು, ವೇತನ ಭತ್ಯೆ ಹೆಚ್ಚಳವಾಗದೇ ಅವರಿಗೂ ತೊಂದರೆಯಾಗಿದೆ. ನಷ್ಟದಿಂದ ಬಸ್ ಗಳ ಓಡಾಟ ನಿಂತು ಹೋದರೆ ನೂರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಲಿವೆ ಎಂದು ಪತ್ರದಲ್ಲಿ ಬರೆದಿದ್ದಾರೆ.

ನಷ್ಟ ಸರಿದೋಗಿಸಿ ಖಾಸಗಿ ಬಸ್ ಉದ್ಯಮ ಉಳಿಸಲು ಸಾರಿಗೆ ಸಂಸ್ಥೆಯ ಬಸ್ ಗಳ ರೀತಿ ಖಾಸಗಿ ಬಸ್ ಗಳ ಪ್ರಯಾಣ ದರವನ್ಜು ಹೆಚ್ಚಳ ಮಾಡಲು ಅವಕಾಶ ಮಾಡಿಕೊಡುವಂತೆ ಅವರು ಪತ್ರದಲ್ಲಿ ಕೋರಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments