ಶ್ರದ್ಧಾಳಂತೆ ಮತ್ತೊಂದು ಬರ್ಬರ ಹತ್ಯೆ

Webdunia
ಸೋಮವಾರ, 28 ನವೆಂಬರ್ 2022 (14:47 IST)
ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ನಡುವೆ ದೆಹಲಿಯಲ್ಲಿ ಅಂತದ್ದೇ ಮತ್ತೊಂದು ಪ್ರಕರಣ ಬಹಿರಂಗವಾಗಿದೆ, ಇದೀಗ ಈ ಪ್ರಕರಣ ಮತ್ತೊಮ್ಮೆ ದೆಹಲಿಯನ್ನು ಬೆಚ್ಚಿಬೀಳಿಸಿದೆ. ಪೊಲೀಸರು ಶ್ರದ್ಧಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ. ಇದೀಗ ಅವರು ಮತ್ತೊಂದು ಇಂತದೇ ಕೊಲೆ ಪ್ರಕರಣವನ್ನು ಪತ್ತೆ ಮಾಡಿದ್ದಾರೆ. ಪೂರ್ವ ದೆಹಲಿಯಲ್ಲಿ ಒಬ್ಬ ವ್ಯಕ್ತಿಯ ಕತ್ತರಿಸಿದ ದೇಹದ ಭಾಗಗಳನ್ನು ಅವರು ಪತ್ತೆ ಹಚ್ಚಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ಬ್ರಾಂಚ್ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ದೆಹಲಿಯ ಪಾಂಡವನಗರದ ಮಹಿಳೆ ಮತ್ತು ಆಕೆಯ ಮಗನನ್ನು ಅಪರಾಧ ವಿಭಾಗ ಬಂಧಿಸಿದೆ. ತಾಯಿ ಮತ್ತು ಮಗ ಜತೆ ಸೇರಿ ಪತಿಯನ್ನು ಕೊಂದು ಶವವನ್ನು ಕತ್ತರಿಸಿ ಫ್ರಿಡ್ಜ್​ನಲ್ಲಿಟ್ಟಿದ್ದಾರೆ. ಇಬ್ಬರೂ ಬೇರೆ ಬೇರೆ ದಿನಗಳಲ್ಲಿ ಬಂದು ಮಧ್ಯರಾತ್ರಿಯಲ್ಲಿ ಮೃತದೇಹದ ಭಾಗಗಳನ್ನು ಚಾಂದ್ ಚಿತ್ರಮಂದಿರದ ಮುಂಭಾಗದ ಮೈದಾನದಲ್ಲಿ ಎಸೆದಿದ್ದರು. ತಂದೆಗೆ ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧವಿತ್ತು ಎಂದು ತನಿಖೆಯ ವರದಿ ತಿಳಿಸಿದೆ. ಅದಕ್ಕಾಗಿಯೇ ಮಗ ತಾಯಿಯೊಂದಿಗೆ ಸೇರಿ ಈ ಕೃತ್ಯವನ್ನು ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಹೆಸರು ಪೂನಂ ಮತ್ತು ಮಗನ ಹೆಸರು ದೀಪಕ್ ಹಾಗೂ ಮೃತರ ಹೆಸರು ಅಂಜನ್ ದಾಸ್ ಎಂದು ಹೇಳಲಾಗಿದೆ. ತಾಯಿ ಮತ್ತು ಮಗ ಇಬ್ಬರೂ ಮೃತ ಅಂಜನ್ ದಾಸ್‌ಗೆ ಮೊದಲು ಅಮಲು ಮಾತ್ರೆಗಳನ್ನು ತಿನ್ನಿಸಿ, ನಂತರ ಕೊಂದಿದ್ದಾರೆ. ಕೊಂದ ನಂತರ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮಾಡಿ ಫ್ರಿಡ್ಜ್ ನಲ್ಲಿಟ್ಟಿದ್ದರು. ಯಾರಿಗೂ ಅನುಮಾನ ಬರದಂತೆ ಬೇರೆ ಬೇರೆ ದಿನಗಳಲ್ಲಿ, ಮಧ್ಯರಾತ್ರಿಯಲ್ಲಿ, ಮೃತ ದೇಹಗಳ ತುಂಡುಗಳನ್ನು ಚಾಂದ್ ಚಿತ್ರಮಂದಿರದ ಮುಂಭಾಗದ ಮೈದಾನದಲ್ಲಿ ಎಸೆದಿದ್ದರು. ದೆಹಲಿ ಪೊಲೀಸರು ಸದ್ಯ ಆರೋಪಿಗಳಾದ ಪೂನಂ ಮತ್ತು ದೀಪಕ್ ಇಬ್ಬರನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments