ಧರ್ಮಸ್ಥಳ ಬುರುಡೆ ರಹಸ್ಯಕ್ಕೆ ಬಿಗ್ ಟ್ವಿಸ್ಟ್: ಚೀಲಗಳಲ್ಲಿ ತುಂಬಿ ತಂದಿದ್ದ ಬುರುಡೆ ಯಾರದ್ದು

Krishnaveni K
ಗುರುವಾರ, 18 ಸೆಪ್ಟಂಬರ್ 2025 (10:43 IST)
ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಂಗ್ಲೆಗುಡ್ಡದಲ್ಲಿ ಸಿಕ್ಕಿರುವ ಅಸ್ಥಿಪಂಜರಗಳನ್ನು ಚೀಲಗಳಲ್ಲಿ ತುಂಬಿ ತರಲಾಗಿದ್ದು ಈ ಅಸ್ಥಿಪಂಜರಗಳು ಯಾರದ್ದು ಎನ್ನುವ ಪ್ರಶ್ನೆ ಎದುರಾಗಿದೆ.

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಒಂದು ಅಂತ್ಯ ಸಿಕ್ಕಿತು ಎನ್ನುವಾಗಲೇ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಬಂಗ್ಲೆಗುಡ್ಡದಲ್ಲಿ ಅಸ್ಥಿಪಂಜರಗಳಿವೆ ಎಂದು ಸೌಜನ್ಯ ಮಾವ ವಿಠಲ ಗೌಡ ಹೇಳಿದ್ದರು. ಈ ಹಿನ್ನಲೆಯಲ್ಲಿ ಮತ್ತೆ ಅಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.

ನಿನ್ನೆ ಮೊದಲ ದಿನವೇ ಐದು ಕಡೆ ಮೂಳೆಗಳಿ, ತಲೆಬುರುಡೆಗಳು ಸಿಕ್ಕಿವೆ. ಇದನ್ನೀಗ ಎಫ್ ಎಸ್ಎಲ್ ವರದಿಗೆ ಕಳುಹಿಸಲಾಗಿದೆ. ಇಲ್ಲಿ ಭೂಮಿಯ ಮೇಲ್ಭಾಗದಲ್ಲೇ ಅಸ್ಥಿಪಂಜರಗಳು ಪತ್ತೆಯಾಗಿವೆ. ಆತ್ಮಹತ್ಯೆ ಮಾಡಲು ಕಟ್ಟಿರುವ ರೀತಿಯಲ್ಲಿ ಸೀರೆಯ ಅವಶೇಷಗಳೂ ಸಿಕ್ಕಿವೆ. ಜೊತೆಗೆ ಹಿರಿಯ ನಾಗರಿಕರ ಕಾರ್ಡ್, ವಾಕರ್ ಕೂಡಾ ಸಿಕ್ಕಿವೆ.

ಹೀಗಾಗಿ ಮೇಲ್ನೋಟಕ್ಕೆ ಇವುಗಳನ್ನೆಲ್ಲಾ ಗಮನಿಸಿದರೆ ಧರ್ಮಸ್ಥಳ ಪುಣ್ಯಭೂಮಿಗೇ ಬಂದು ಪ್ರಾಣ ಬಿಡಬೇಕು ಎನ್ನುವ ದೃಷ್ಟಿಯಿಂದಲೇ ಇಲ್ಲಿಗೆ ಬಂದು ಆತ್ಮಹತ್ಯೆ ಮಾಡಿರಬಹುದು ಎನ್ನುವಂತಿದೆ. ಇದನ್ನು ಸ್ಥಳೀಯರೇ ಹೇಳುತ್ತಿದ್ದಾರೆ. ಈ ಹಿಂದೆ ಇಲ್ಲಿಗೆ ಸಾಕಷ್ಟು ಜನ ಬಂದು ಆತ್ಮಹತ್ಯೆ ಮಾಡುತ್ತಿದ್ದರು ಎನ್ನುತ್ತಿದ್ದಾರೆ. ಹೀಗಾಗಿ ಇವುಗಳೆಲ್ಲವೂ ಆತ್ಮಹತ್ಯೆಯ ಕುರುಹುಗಳೇ ಅಥವಾ ಯಾರಾದರೂ ಕೊಲೆ ಮಾಡಿ ಇಲ್ಲಿ ತಂದು ಹಾಕುತ್ತಿದ್ದರೇ ಎನ್ನುವುದು ತನಿಖೆಯಿಂದ ಬಯಲಾಗಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments