Select Your Language

Notifications

webdunia
webdunia
webdunia
webdunia

ಬೆಳಗಾವಿಯಲ್ಲಿ ಮತ್ತೊಂದು ಬಿಜೆಪಿ ವಿಕೆಟ್ ಪತನ

ಬೆಳಗಾವಿಯಲ್ಲಿ ಮತ್ತೊಂದು ಬಿಜೆಪಿ ವಿಕೆಟ್ ಪತನ
ಬೆಳಗಾವಿ , ಶುಕ್ರವಾರ, 14 ಏಪ್ರಿಲ್ 2023 (12:37 IST)
ಬೆಳಗಾವಿ : ಹುಕ್ಕೇರಿ ಮತಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಬಯಸಿದ್ದ ಮಾಜಿ ಸಚಿವ ಶಶಿಕಾಂತ್ ನಾಯ್ಕ್ ಬಿಜೆಪಿಗೆ ಗುಡ್ ಬೈ ಹೇಳಲು ಮುಂದಾಗಿದ್ದಾರೆ. ಕತ್ತಿ ಕುಟುಂಬದ ಕಿರುಕುಳಕ್ಕೆ ಬೇಸತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಜಿ ಸಚಿವ ಶಶಿಕಾಂತ್ ನಾಯ್ಕ್ ತಿಳಿಸಿದ್ದಾರೆ.
 
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಇಪ್ಪತ್ತು ವರ್ಷಗಳಿಂದ ಬಿಜೆಪಿಯಲ್ಲಿ ಕೆಲಸ ಮಾಡುತ್ತ ಬಂದಿದ್ದೇನೆ. ಜಿಲ್ಲೆಯಲ್ಲಿ ಬಿಜೆಪಿಯನ್ನು ಹಳ್ಳಿಮಟ್ಟದಿಂದ ಬೆಳೆಸಲು ಬಾಬಾಗೌಡ ಪಾಟೀಲ್ ಜೊತೆ ಕೆಲಸ ಮಾಡಿದ್ದೇನೆ.

ಕೇವಲ ಒಂದು ಸಲ ಮಾತ್ರ ನನಗೆ ಹುಕ್ಕೇರಿ ಮತಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಕೊಟ್ಟಿದೆ. ಆ ವೇಳೆ ದಿ.ಉಮೇಶ್ ಕತ್ತಿ ವಿರುದ್ಧ ಗೆದ್ದು ಮಂತ್ರಿ ಕೂಡ ಆಗಿದ್ದೆ. 243 ಕೋಟಿ ರೂಪಾಯಿ ಹಣ ಬಿಡುಗಡೆ ಸುವರ್ಣ ವಿಧಾನಸೌಧ ನಿರ್ಮಾಣ ಮಾಡಿದ್ದೇನೆ. ಅನೇಕ ನೀರಾವರಿ ಯೋಜನೆ ಸೌಲಭ್ಯ ಮಾಡಿದ್ದೇನೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಪ್ಯಾಸೆಂಜರ್ ಆದಾಯದಲ್ಲಿ ರೈಲ್ವೆ 2,755 ಕೋಟಿ ರೂ. ದಾಖಲೆ