ಕರ್ನಾಟಕದಲ್ಲಿ ಕೊರೊನಾದಿಂದ ಮತ್ತೊಂದು ಸಾವು

Webdunia
ಬುಧವಾರ, 25 ಮಾರ್ಚ್ 2020 (15:22 IST)
ಕೊರೊನಾ ವೈರಸ್ ನಿಂದಾಗಿ ಮಹಿಳೆಯೊಬ್ಬರು ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಗೌರಿಬಿದನೂರಿನಲ್ಲಿ ಹೋಮ್ ಕ್ವಾರಂಟೈನ್ ನಲ್ಲಿದ್ದ 70 ವರ್ಷ ಪ್ರಾಯದ ವೃದ್ಧೆಯೊಬ್ಬರು ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಆಸ್ಪತ್ರೆಯಲ್ಲಿ ಮೃತಪಟ್ಟದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಈಗಾಗಲೇ ಒಂದೇ ಕುಟುಂಬದ ಮೂವರಲ್ಲಿ ಕೋವಿಡ್ 19 ಸೋಂಕು ದೃಢಪಟ್ಟಿದೆ. ಈ ನಡುವೆ ಹೋಮ್ ಕ್ವಾರೆಂಟೈನ್ ನಲ್ಲಿದ್ದ ಮಹಿಳೆ ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಮೂರು ಕೋವಿಡ್ 19 ಸೋಂಕು ಪತ್ತೆಯಾಗಿದ್ದ ಆ ಕುಟುಂಬಕ್ಕೆ ಸಂಬಂಧಿಸಿದವರು ಇವರಾಗಿದ್ದರು ಎಂಬ ಮಾಹಿತಿ ಇದೀಗ ಲಭಿಸಿದೆ. ಈ ವೃದ್ಧೆ ಮೆಕ್ಕಾ ಪ್ರವಾಸದಿಂದ ಹಿಂದಿರುಗಿದ್ದರು. ಆ ಬಳಿಕ ಅವರು ಹೋಮ್ ಕ್ವಾರಂಟೈನ್ ನಲ್ಲಿದ್ದರು.

ಈ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅಲ್ಲಿಂದ ಅವರನ್ನು ಬೌರಿಂಗ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಬೌರಿಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

ಈ ಮಹಿಳೆ ಮಧುಮೇಹ, ಎದೆನೋವು, ಹಾಗೂ ಪೃಷ್ಠಭಾಗದ ಮುರಿತದಿಂದ ಬಳಲುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಮಹಿಳೆಯ ಸಾವಿಗೆ ಕೋವಿಡ್ 19 ಸೋಂಕು ಕಾರಣವೇ ಎಂಬುದು ಪರೀಕ್ಷಾ ವರದಿಗಳ ಬಳಿಕವೇ ಖಚಿತವಾಗಬೇಕಿದೆ ಎಂಬ ಮಾಹಿತಿಯನ್ನೂ ಸಹ ಸಚಿವರು ಇದೇ ಸಂದರ್ಭದಲ್ಲಿ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಮುಂದಿನ ಸುದ್ದಿ
Show comments