ಚುನಾವಣೆ ಹೊಸ್ತಿಲಲ್ಲಿ ರಾಜಧಾನಿ ಬೆಂಗಳೂರಲ್ಲಿ ಮತ್ತೊಂದು ಧರ್ಮ ದಂಗಲ್

Webdunia
ಭಾನುವಾರ, 26 ಫೆಬ್ರವರಿ 2023 (18:03 IST)
ಕೇವಲ ವ್ಯಾಪಾರ ವಹಿವಾಟು ಅಂತಿದ್ದ SP ರಸ್ತೆಗೆ ಕಾಲಿಟ್ಟ ಕಿಡಿಗೇಡಿಗಳು ಧರ್ಮದ  ಪಿತೂರಿ ನಡೆಸಿದ್ದಾರೆ.ಇಲ್ಲಿನ ಮುಸ್ಲಿಂ ವ್ಯಾಪಾರಿಗಳು ಜಿಹಾದಿಗಳೆಂದು SP ರೋಡ್ ನಲ್ಲಿ ಕೆಲವರಿಂದ ಕುಕೃತ್ಯ ನಡೆಯುತ್ತಿದೆ.ಹೀಗಾಗಿ SP ರೋಡ್ ವ್ಯಾಪಾರಿಗಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
 
 ಕಿಡಿಕೇಡಿಗಳ ಕೃತ್ಯದಿಂದ ಒಗ್ಗಟ್ಟಾಗಿ  ವ್ಯಾಪಾರಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದಾರೆ.ರಾಜ್ಯದ ಎಲೆಕ್ಟ್ರಾನಿಕ್ ವಸ್ತುಗಳ ಅತಿದೊಡ್ಡ ಮಾರುಕಟ್ಟೆ ಎಸ್ ಪಿ ರಸ್ತೆ.ಮುಸ್ಲಿಮರು ಇಲ್ಲಿ ವ್ಯಾಪಾರ ಮಾಡಿ ಅದರ ದುಡ್ಡಿಂದ ಜಿಹಾದಿಗಳು ಆಗ್ತಾರೆ ಅಂತ ಅಪಪ್ರಚಾರ ಮಾಡಿದ್ದಾರೆ.ಇದರಿಂದಾಗಿ ಎಸ್ ಪಿ ರಸ್ತೆ ವ್ಯಾಪಾರದಲ್ಲಿ ಬಿರುಗಾಳಿ ಉಂಟಾಗಿದೆ. ವ್ಯಾಪಾರ ಕುಗ್ಗಿದೆ ಅಂತ  ವ್ಯಾಪಾರಸ್ಥರು ಆಕ್ರೋಶ. ಹೊರಹಾಕಿದ್ದಾರೆ.
 
ಯೂಟ್ಯೂಬ್ ಚಾನೆಲ್ ಮೂಲಕ ಮುಸ್ಲಿಂ ವ್ಯಾಪಾರಿಗಳ ವಿರುದ್ಧ ಇಲ್ಲದ ಸುದ್ದಿ ಕಿಡಿಗೇಡಿಗಳು ಹರಿಬಿಟ್ಟಿದ್ದಾರೆ.ಹೀಗಾಗಿ ವ್ಯಾಪಾರದಲ್ಲಿ ಧಾರ್ಮಿಕತೆ ತಂದ ವಿಚಾರವಾಗಿ ಎಸ್ ಪಿ ರಸ್ತೆ ವರ್ತಕರು ದೂರು ದಾಖಲಿಸಿದಾರೆ.ಕಿಡಿಗೇಡಿಗಳಿಂದ ವ್ಯಾಪಾರದಲ್ಲಿ ಧರ್ಮತರಲಾಗ್ತಿದೆ ಎಂದು  ಎಲ್ಲಾ ಧರ್ಮದ ವರ್ತಕರು ಪೊಲೀಸ್ ಠಾಣೆ ಮೆಟ್ಟೀಲೇರಿದರು.ಅನಗತ್ಯವಾಗಿ SP ರಸ್ತೆಯಲ್ಲಿ ವಿವಾದ ಸೃಷ್ಟಿಸಿ ಧರ್ಮ ಹೊಡೆಯುವ ಕೆಲಸ ಆಗ್ತಿದೆ.
 
ಈ ವೇಳೆ ಮಾತನಾಡಿದ ವರ್ತಕ ಶಿವಕುಮಾರ್ ನಾವಿಲ್ಲಿ ಎಲ್ಲಾ ಧರ್ಮದವರೂ ಅಣ್ಣ ತಮ್ಮಂದಿರಂತೆ ವ್ಯಾಪಾರ ಮಾಡ್ಕೊಂಡಿದ್ದೇವೆ.ಹಲವಾರು ವರ್ಷಗಳಿಂದ ನಾವಿಲ್ಲಿ ವ್ಯಾಪಾರ ಮಾಡ್ಕೊಂಡು ಬಂದಿದ್ದೇವೆ ನಮ್ಮ ಅನ್ನಕ್ಕೆ ಮಣ್ಣಾಕ ಬೇಡಿ ಅಂತ ಮುಸ್ಲಿಂ ವರ್ತಕರು ಮನವಿ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments