Select Your Language

Notifications

webdunia
webdunia
webdunia
webdunia

ಜಿಲ್ಲಾಧಿಕಾರಿ ಎದುರು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು

ಜಿಲ್ಲಾಧಿಕಾರಿ ಎದುರು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು
ಚಿಕ್ಕ ಬಳ್ಳಾಪುರ , ಶುಕ್ರವಾರ, 22 ಏಪ್ರಿಲ್ 2016 (08:40 IST)
ಕಳೆದ 20 ನೇ ತಾರೀಖಿನಂದು ಜಿಲ್ಲಾಧಿಕಾರಿ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ್ದ ಕೈತ ಆನಂದ ಕುಮಾರ್ ಇಂದು ಗುರುವಾರ- ಶುಕ್ರವಾರದ ನಡುವಿನ ರಾತ್ರಿ 2.30 ರ ಸುಮಾರಿಗೆ ಮೃತ ಪಟ್ಟಿದ್ದಾರೆ. 
 
ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ತಾಲ್ಲೂಕಿನ ಅಂಗರೇಖನಹಳ್ಳಿ ರೈತ ಆನಂದಕುಮಾರ್ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎಂ.ವಿ ವೆಂಕಟೇಶ್ ಎದುರೇ ಅವರು ವಿಷ ಸೇವಿಸಿದ್ದರು. ತಕ್ಷಣ  ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಸ್ಥಿತಿ ಗಂಭೀರವಾಗಿದ್ದರಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ತುರ್ತು ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. 
 
ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
 
ರೈತನ ಸಾವಿನಿಂದ ಆಕ್ರೋಶಗೊಂಡಿರುನ ವಿವಿಧ ಸಂಘಟನೆಗಳು ಜಿಲ್ಲಾಡಳಿತದ ವೈಫಲ್ಯ ಖಂಡಿಸಿ ಇಂದು ಚಿಕ್ಕ ಬಳ್ಳಾಪುರ್ ಬಂದ್‌ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
 

Share this Story:

Follow Webdunia kannada